<p><strong>ಯಲ್ಲಾಪುರ</strong>:ಪ್ರಜಾಪ್ರಭುತ್ವದ ಅಡಿಗಲ್ಲು ಅಲ್ಲಾಡದಂತೆ ಕಾಪಾಡಬೇಕಾದದ್ದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲ್ಲೂಕು ಆಡಳಿತ ಭಾನುವಾರ ತಾಟವಾಳದಲ್ಲಿ ಆಯೋಜಿಸಿದ ಮಾನವ ಸರಪಳಿಗೆ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮಹತ್ವವನ್ನು ಅರ್ಥಮಾಡಿಕೊಂಡು ಅದನ್ನು ಇನ್ನಷ್ಟು ಗಟ್ಟಿಗೊಳಿಸಬೇಕು. ಅನೇಕರ ಹೋರಾಟದ ಫಲವಾಗಿ ಅಸ್ತಿತ್ವಕ್ಕೆ ಬಂದ ಪ್ರಜಾಪ್ರಭುತ್ವದ ಅಡಿಗಲ್ಲು ಸದಾ ಭದ್ರವಾಗಿರಬೇಕು. ಪ್ರಜಾಪ್ರಭುತ್ವದ ಆಶಯಗಳು ಈಡೇರಬೇಕು’ ಎಂದರು.</p>.<p>ರಾಜ್ಯ ವಿಕೇಂದ್ರೀಕರಣ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ ಮಾತನಾಡಿ, ‘ಪ್ರಜಾಪ್ರಭುತ್ವದಿಂದಾಗಿ ಭಾರತ ಇಂದು ಅಭಿವೃದ್ಧಿ ಸಾಧಿಸುತ್ತಿದೆ. ಜಾತಿ, ಧರ್ಮ, ಗಡಿ, ನೀರು, ಭಾಷೆ ಮೊದಲಾದ ಎಲ್ಲ ಭಿನ್ನತೆಯ ನಡುವೆಯೂ ನಾವು ಒಂದಾಗಿ ಪ್ರಜಾಪ್ರಭುತ್ವವನ್ನು ಕಾಪಾಡಬೇಕು’ ಎಂದರು.</p>.<p>ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಜ್ಯೋತಿ ನರೋಟಿ ಸಂವಿಧಾನದ ಪ್ರಸ್ತಾವನೆ ಓದಿದರು. ಯಲ್ಲಾಪುರ ತಹಶೀಲ್ದಾರ್ ಯಲ್ಲಪ್ಪ ಗೊನೆಣ್ಣವರ, ಮುಂಡಗೋಡ ತಹಶೀಲ್ದಾರ್ ಶಂಕರ ಗೌಡಿ, ಪೊಲೀಸ್ ಇನ್ಸ್ಪೆಪೆಕ್ಟರ್ ರಮೇಶ ಹಾನಾಪುರ, ಪ್ರಮುಖರಾದ ವಿಜಯ ಮಿರಾಶಿ, ಲಾರೆನ್ಸ್ ಸಿದ್ದಿ ಇದ್ದರು.</p>.<p>ಶಿಕ್ಷಕ ಚಂದ್ರಹಾಸ ನಾಯಕ ನಿರ್ವಹಿಸಿದರು. ಮೊರಾರ್ಜಿ ವಸತಿ ಶಾಲೆಯ ಎನ್ಸಿಸಿ ತಂಡದವರು ನಾಡಗೀತೆ ಪ್ರಸ್ತುತ ಪಡಿಸಿದರು. ಪಟ್ಟಣದ ಬಿಸಗೋಡು ಕ್ರಾಸ್ನಿಂದ ಎಪಿಎಂಸಿ ವರೆಗೆ ಮಾನವ ಸರಪಳಿ ನಿರ್ಮಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ</strong>:ಪ್ರಜಾಪ್ರಭುತ್ವದ ಅಡಿಗಲ್ಲು ಅಲ್ಲಾಡದಂತೆ ಕಾಪಾಡಬೇಕಾದದ್ದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲ್ಲೂಕು ಆಡಳಿತ ಭಾನುವಾರ ತಾಟವಾಳದಲ್ಲಿ ಆಯೋಜಿಸಿದ ಮಾನವ ಸರಪಳಿಗೆ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮಹತ್ವವನ್ನು ಅರ್ಥಮಾಡಿಕೊಂಡು ಅದನ್ನು ಇನ್ನಷ್ಟು ಗಟ್ಟಿಗೊಳಿಸಬೇಕು. ಅನೇಕರ ಹೋರಾಟದ ಫಲವಾಗಿ ಅಸ್ತಿತ್ವಕ್ಕೆ ಬಂದ ಪ್ರಜಾಪ್ರಭುತ್ವದ ಅಡಿಗಲ್ಲು ಸದಾ ಭದ್ರವಾಗಿರಬೇಕು. ಪ್ರಜಾಪ್ರಭುತ್ವದ ಆಶಯಗಳು ಈಡೇರಬೇಕು’ ಎಂದರು.</p>.<p>ರಾಜ್ಯ ವಿಕೇಂದ್ರೀಕರಣ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ ಮಾತನಾಡಿ, ‘ಪ್ರಜಾಪ್ರಭುತ್ವದಿಂದಾಗಿ ಭಾರತ ಇಂದು ಅಭಿವೃದ್ಧಿ ಸಾಧಿಸುತ್ತಿದೆ. ಜಾತಿ, ಧರ್ಮ, ಗಡಿ, ನೀರು, ಭಾಷೆ ಮೊದಲಾದ ಎಲ್ಲ ಭಿನ್ನತೆಯ ನಡುವೆಯೂ ನಾವು ಒಂದಾಗಿ ಪ್ರಜಾಪ್ರಭುತ್ವವನ್ನು ಕಾಪಾಡಬೇಕು’ ಎಂದರು.</p>.<p>ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಜ್ಯೋತಿ ನರೋಟಿ ಸಂವಿಧಾನದ ಪ್ರಸ್ತಾವನೆ ಓದಿದರು. ಯಲ್ಲಾಪುರ ತಹಶೀಲ್ದಾರ್ ಯಲ್ಲಪ್ಪ ಗೊನೆಣ್ಣವರ, ಮುಂಡಗೋಡ ತಹಶೀಲ್ದಾರ್ ಶಂಕರ ಗೌಡಿ, ಪೊಲೀಸ್ ಇನ್ಸ್ಪೆಪೆಕ್ಟರ್ ರಮೇಶ ಹಾನಾಪುರ, ಪ್ರಮುಖರಾದ ವಿಜಯ ಮಿರಾಶಿ, ಲಾರೆನ್ಸ್ ಸಿದ್ದಿ ಇದ್ದರು.</p>.<p>ಶಿಕ್ಷಕ ಚಂದ್ರಹಾಸ ನಾಯಕ ನಿರ್ವಹಿಸಿದರು. ಮೊರಾರ್ಜಿ ವಸತಿ ಶಾಲೆಯ ಎನ್ಸಿಸಿ ತಂಡದವರು ನಾಡಗೀತೆ ಪ್ರಸ್ತುತ ಪಡಿಸಿದರು. ಪಟ್ಟಣದ ಬಿಸಗೋಡು ಕ್ರಾಸ್ನಿಂದ ಎಪಿಎಂಸಿ ವರೆಗೆ ಮಾನವ ಸರಪಳಿ ನಿರ್ಮಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>