<p><strong>ಸಿದ್ದಾಪುರ</strong>: ‘ರೈತರು ಹೈನುಗಾರಿಕೆಯಿಂದ ಹೆಚ್ಚಿನ ಹಾಲು ಉತ್ಪಾದನೆ ಮಾಡಿ ಲಾಭ ಗಳಿಸಬೇಕಾದರೆ ಹಸಿ ಮೇವಿನ ಬಳಕೆ ಮಾಡಬೇಕು. ಈ ಕುರಿತು ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ತಜ್ಞರಿಂದ ಮಾಹಿತಿ ಕಾರ್ಯಾಗಾರ ನಡೆಸಲಾಗುತ್ತದೆ’ ಎಂದು ಧಾರವಾಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ.ಟಿ.ಕಳಸದ ಹೇಳಿದರು.</p>.<p>ಪಟ್ಟಣದ ಹೊಸೂರಿನಲ್ಲಿರುವ ಧಾರವಾಡ ಹಾಲು ಒಕ್ಕೂಟದ ಸಿದ್ದಾಪುರ ಉಪವಿಭಾಗದ ಕಚೇರಿಯಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಧಾರವಾಡ ಹಾಲು ಒಕ್ಕೂಟ ಈಗ ಉತ್ತಮ ಸ್ಥಿತಿಯಲ್ಲಿದೆ. ಒಕ್ಕೂಟದಿಂದ ಸಂಘಗಳಿಗೆ ಸಿಗಬೇಕಾದ ಸೌಲಭ್ಯ ನೀಡಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆ ಸಂಪದ್ಬರಿತವಾಗಿದ್ದು ಹಾಲಿನ ಉತ್ಪಾದನೆ ಕುರಿತು ಮಾಹಿತಿ ಕಾರ್ಯಾಗಾರಗಳು ನಡೆಯುತ್ತಿರಬೇಕು ಎಂದರು.</p>.<p>ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪಿ.ವಿ. ನಾಯ್ಕ ಬೇಡ್ಕಣಿ ಮಾತನಾಡಿದರು. ಕಡಕೇರಿ ಹಾಲು ಸಂಘದ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಮಗೆಗಾರ, ಡಾ.ರಾಕೇಶ, ಡಾ.ವಿನಾಯಕ ಬಿರಾದಾರ, ವಿಸ್ತರಣಾಧಿಕಾರಿ ಚಂದನ ನಾಯ್ಕ ಉಪಸ್ಥಿತರಿದ್ದರು.</p>.<p>ಬಾಳೇಸರ , ಶಿರಳಗಿ, ಬಿಳಗಿ, ಗೊಳಿಮಕ್ಕಿ ಸಂಘದ ಅಧ್ಯಕ್ಷರುಗಳು ಹಾಗೂ ಹಾರ್ಸಿಕಟ್ಟ ಹಾಲು ಸಂಘದ ಕಾರ್ಯದರ್ಶಿ ಮಾತನಾಡಿದರು.</p>.<p>ಧಾರವಾಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ.ಟಿ. ಕಳಸದ ಅವರನ್ನು ಸನ್ಮಾನಿಸಲಾಯಿತು. ಭಾರತಿ ಭಟ್ಟ ಕವಲಕೊಪ್ಪ ಪ್ರಾರ್ಥಿಸಿದರು. ಶಿರಸಿ ಉಪವಿಭಾಗದ ವ್ಯವಸ್ಥಾಪಕ ಎಸ್.ಎಸ್.ಬಿಜ್ಜೂರು ಕಾರ್ಯಕ್ರಮ ನಿರ್ವಹಿಸಿದರು. ವಿಸ್ತರಣಾಧಿಕಾರಿ ಪ್ರಕಾಶ ಕೆ. ಸ್ವಾಗತಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ‘ರೈತರು ಹೈನುಗಾರಿಕೆಯಿಂದ ಹೆಚ್ಚಿನ ಹಾಲು ಉತ್ಪಾದನೆ ಮಾಡಿ ಲಾಭ ಗಳಿಸಬೇಕಾದರೆ ಹಸಿ ಮೇವಿನ ಬಳಕೆ ಮಾಡಬೇಕು. ಈ ಕುರಿತು ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ತಜ್ಞರಿಂದ ಮಾಹಿತಿ ಕಾರ್ಯಾಗಾರ ನಡೆಸಲಾಗುತ್ತದೆ’ ಎಂದು ಧಾರವಾಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ.ಟಿ.ಕಳಸದ ಹೇಳಿದರು.</p>.<p>ಪಟ್ಟಣದ ಹೊಸೂರಿನಲ್ಲಿರುವ ಧಾರವಾಡ ಹಾಲು ಒಕ್ಕೂಟದ ಸಿದ್ದಾಪುರ ಉಪವಿಭಾಗದ ಕಚೇರಿಯಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಧಾರವಾಡ ಹಾಲು ಒಕ್ಕೂಟ ಈಗ ಉತ್ತಮ ಸ್ಥಿತಿಯಲ್ಲಿದೆ. ಒಕ್ಕೂಟದಿಂದ ಸಂಘಗಳಿಗೆ ಸಿಗಬೇಕಾದ ಸೌಲಭ್ಯ ನೀಡಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆ ಸಂಪದ್ಬರಿತವಾಗಿದ್ದು ಹಾಲಿನ ಉತ್ಪಾದನೆ ಕುರಿತು ಮಾಹಿತಿ ಕಾರ್ಯಾಗಾರಗಳು ನಡೆಯುತ್ತಿರಬೇಕು ಎಂದರು.</p>.<p>ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪಿ.ವಿ. ನಾಯ್ಕ ಬೇಡ್ಕಣಿ ಮಾತನಾಡಿದರು. ಕಡಕೇರಿ ಹಾಲು ಸಂಘದ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಮಗೆಗಾರ, ಡಾ.ರಾಕೇಶ, ಡಾ.ವಿನಾಯಕ ಬಿರಾದಾರ, ವಿಸ್ತರಣಾಧಿಕಾರಿ ಚಂದನ ನಾಯ್ಕ ಉಪಸ್ಥಿತರಿದ್ದರು.</p>.<p>ಬಾಳೇಸರ , ಶಿರಳಗಿ, ಬಿಳಗಿ, ಗೊಳಿಮಕ್ಕಿ ಸಂಘದ ಅಧ್ಯಕ್ಷರುಗಳು ಹಾಗೂ ಹಾರ್ಸಿಕಟ್ಟ ಹಾಲು ಸಂಘದ ಕಾರ್ಯದರ್ಶಿ ಮಾತನಾಡಿದರು.</p>.<p>ಧಾರವಾಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ.ಟಿ. ಕಳಸದ ಅವರನ್ನು ಸನ್ಮಾನಿಸಲಾಯಿತು. ಭಾರತಿ ಭಟ್ಟ ಕವಲಕೊಪ್ಪ ಪ್ರಾರ್ಥಿಸಿದರು. ಶಿರಸಿ ಉಪವಿಭಾಗದ ವ್ಯವಸ್ಥಾಪಕ ಎಸ್.ಎಸ್.ಬಿಜ್ಜೂರು ಕಾರ್ಯಕ್ರಮ ನಿರ್ವಹಿಸಿದರು. ವಿಸ್ತರಣಾಧಿಕಾರಿ ಪ್ರಕಾಶ ಕೆ. ಸ್ವಾಗತಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>