ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ವಿದ್ಯುದೀಕರಣ ಯೋಜನೆಯಡಿ ಜೊಯಿಡಾ ತಾಲ್ಲೂಕಿನ ಬಜಾರ್ ಕುಣಾಂಗ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ನೀಡಲು ಆಗುತ್ತಿರುವ ವಿಳಂಬದ ಕುರಿತು ಚರ್ಚಿಸಲು, ಕಾಮಗಾರಿ ಗುತ್ತಿಗೆ ಪಡೆದಿದ್ದ ಬಜಾಜ್ ಎಲೆಕ್ಟ್ರಾನಿಕ್ಸ್ ಕಂಪನಿಯ ಸ್ಥಳೀಯ ವ್ಯವಸ್ಥಾಪಕರನ್ನು, ಸಚಿವರು ಭಾನುವಾರ ಮನೆಗೆ ಕರೆದಿದ್ದರು. ಈ ಸಂದರ್ಭ ಪರಿಸ್ಥಿತಿ ಕೈ ಮೀರಿ, ಕಂಪನಿ ವ್ಯವಸ್ಥಾಪಕರ ಮೇಲೆ ಸಚಿವರು ಹಲ್ಲೆ ನಡೆಸಿದ್ದು, ನಂತರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ ಎಂಬುದು ಚರ್ಚೆಯಲ್ಲಿರುವ ಸಂಗತಿ.