‘ಬಿ.ಜೆ.ಪಿ.ಗೆ ವಿಧಾನಪರಿಷತ್ ಚುನಾವಣೆಯಲ್ಲಿ ಸೋಲಿನ ಭಯದಿಂದ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮಾಡಿಲ್ಲ’ ಎಂಬ ಆರೋಪಕ್ಕೂ ತಿರುಗೇಟು ನೀಡಿ, ‘ಸೋಲಿನ ಭಯ ಇದ್ದಿದ್ದರೆ ಗ್ರಾಮ ಪಂಚಾಯಿತಿ ಚುನಾವಣೆಯನ್ನೂ ಮಾಡುತ್ತಿರಲಿಲ್ಲ. ಈ ಹಿಂದೆ ತಮಗೆ ಬೇಕಾದ ರೀತಿಯಲ್ಲಿ ಅವೈಜ್ಞಾನಿಕವಾಗಿ ಕ್ಷೇತ್ರ ವಿಂಗಡಣೆ ಮಾಡಿದ್ದರು. ಈ ವಿಚಾರವು ಹೈಕೋರ್ಟ್, ಚುನಾವಣಾ ಆಯೋಗ, ಮುಖ್ಯಮಂತ್ರಿ ಮುಂದೆಯೂ ಇತ್ತು. ಅದನ್ನು ಸರಿಪಡಿಸಲಾಗುತ್ತಿದ್ದು, ಇದರಿಂದಾಗಿ ತಡವಾಗಿದೆ’ ಎಂದರು.