ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, 'ಕಾಡು ಮೇಡು, ಗುಡ್ಡ ಬೆಟ್ಟಗಳಲ್ಲಿ ಬದುಕಿ ಬಾಳುತ್ತಿರುವ, ಕಾಡಿನ ಮಕ್ಕಳೆಂದೇ ಪರಿಗಣಿಸಲಾಗಿರುವ ವನವಾಸಿಗಳನ್ನು ಒಟ್ಟುಗೂಡಿಸಿ, ಆ ಜನಾಂಗದಲ್ಲಿ ರಾಷ್ಟ್ರೀಯತೆ ಮತ್ತು ರಾಷ್ಟ್ರಭಕ್ತಿಯನ್ನು ಶಾಂತರಾಮ ಸಿದ್ದಿ ಮೂಡಿಸುತ್ತಿದ್ದಾರೆ. ಅವರನ್ನು ವಿಧಾನ ಪರಿಷತ್ತಿಗೆ ನಾಮಕರಣ ಮಾಡಿದ್ದು ನಮ್ಮ ಸರ್ಕಾರಕ್ಕೊಂದು ಹೆಮ್ಮೆ' ಎಂದರು.