<p><strong>ಕಾರವಾರ</strong>: ‘ನದಿ ಜೋಡಣೆ ಯೋಜನೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಪರಿಸರ ಅನುಮತಿ ನೀಡದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಡಲಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸವಾಲು ಹಾಕಿದರು.</p>.<p>‘ನದಿ ಜೋಡಣೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಜಿಲ್ಲೆಯ ಪರಿಸರಕ್ಕೆ ತೊಂದರೆ ಆಗಲಿದೆ. ಈ ಯೋಜನೆಗೆ ನನ್ನ ವಿರೋಧವಿದೆ. ಈ ಬಗ್ಗೆ ಸರ್ಕಾರಕ್ಕೂ ಮನವರಿಕೆ ಮಾಡಿದ್ದೇನೆ. ಯೋಜನೆಗೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡದಿದ್ದರೆ ಯೋಜನೆ ಕಾರ್ಯಗತಗೊಳಿಸುವುದು ಕಷ್ಟ. ಕಾಗೇರಿ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಲಿ’ ಎಂದು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೆ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಪ್ರಯತ್ನ ನಡೆದಿತ್ತು. ಯೋಜನೆಯ ವಿಸ್ತೃತ ಯೋಜನಾ ವರದಿ ಆ ಸಮಯದಲ್ಲೇ ಸಿದ್ಧಗೊಂಡಿತ್ತು’ ಎಂದೂ ಹೇಳಿದರು.</p>.<p>‘ಅತಿವೃಷ್ಟಿ ಪರಿಹಾರಕ್ಕೆ ಕೇಂದ್ರದ ನೆರವಿಗೆ ಕಾಯಲಾಗುತ್ತಿದೆ. ಅಲ್ಲಿಂದ ಪರಿಹಾರ ಬಿಡುಗಡೆಯಾದರೆ ಜಿಲ್ಲೆಗೆ ₹100 ಕೋಟಿ ಪರಿಹಾರ ಸಿಗುವ ನಿರೀಕ್ಷೆ ಇದೆ’ ಎಂದರು.</p>.<p>‘ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೌಲಭ್ಯ ಒದಗಿಸಲು ಪ್ರಯತ್ನ ಸಾಗಿದೆ. ಇಲ್ಲಿನ ಆರೋಗ್ಯ ಸೌಕರ್ಯಗಳನ್ನು ಮೇಲ್ದರ್ಜೆಗೇರಿಸುವುದು ಆದ್ಯತೆ ಆಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ನದಿ ಜೋಡಣೆ ಯೋಜನೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಪರಿಸರ ಅನುಮತಿ ನೀಡದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಡಲಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸವಾಲು ಹಾಕಿದರು.</p>.<p>‘ನದಿ ಜೋಡಣೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಜಿಲ್ಲೆಯ ಪರಿಸರಕ್ಕೆ ತೊಂದರೆ ಆಗಲಿದೆ. ಈ ಯೋಜನೆಗೆ ನನ್ನ ವಿರೋಧವಿದೆ. ಈ ಬಗ್ಗೆ ಸರ್ಕಾರಕ್ಕೂ ಮನವರಿಕೆ ಮಾಡಿದ್ದೇನೆ. ಯೋಜನೆಗೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡದಿದ್ದರೆ ಯೋಜನೆ ಕಾರ್ಯಗತಗೊಳಿಸುವುದು ಕಷ್ಟ. ಕಾಗೇರಿ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಲಿ’ ಎಂದು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೆ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಪ್ರಯತ್ನ ನಡೆದಿತ್ತು. ಯೋಜನೆಯ ವಿಸ್ತೃತ ಯೋಜನಾ ವರದಿ ಆ ಸಮಯದಲ್ಲೇ ಸಿದ್ಧಗೊಂಡಿತ್ತು’ ಎಂದೂ ಹೇಳಿದರು.</p>.<p>‘ಅತಿವೃಷ್ಟಿ ಪರಿಹಾರಕ್ಕೆ ಕೇಂದ್ರದ ನೆರವಿಗೆ ಕಾಯಲಾಗುತ್ತಿದೆ. ಅಲ್ಲಿಂದ ಪರಿಹಾರ ಬಿಡುಗಡೆಯಾದರೆ ಜಿಲ್ಲೆಗೆ ₹100 ಕೋಟಿ ಪರಿಹಾರ ಸಿಗುವ ನಿರೀಕ್ಷೆ ಇದೆ’ ಎಂದರು.</p>.<p>‘ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೌಲಭ್ಯ ಒದಗಿಸಲು ಪ್ರಯತ್ನ ಸಾಗಿದೆ. ಇಲ್ಲಿನ ಆರೋಗ್ಯ ಸೌಕರ್ಯಗಳನ್ನು ಮೇಲ್ದರ್ಜೆಗೇರಿಸುವುದು ಆದ್ಯತೆ ಆಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>