ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ದೇವರಾಜ ಅರಸು ಜನ್ಮ ದಿನ: ಶೋಷಿತರ ಗಟ್ಟಿ ಧ್ವನಿಗೆ ಅರಸು ಕಾರಣ- ಸಚಿವ ವೈದ್ಯ

Published 20 ಆಗಸ್ಟ್ 2023, 7:28 IST
Last Updated 20 ಆಗಸ್ಟ್ 2023, 7:28 IST
ಅಕ್ಷರ ಗಾತ್ರ

ಕಾರವಾರ: ಸಮಾಜದಲ್ಲಿ ಒಂದು ಕಾಲದ ದಮನಿತರು, ಹಿಂದುಳಿದ ವರ್ಗದವರು ಇಂದು ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿದ್ದರೆ ಅದಕ್ಕೆ ಡಿ.ದೇವರಾಜ ಅರಸು ಕಾರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ಇಲ್ಲಿನ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಸಮಾರಂಭಕ್ಕೆ ಉದ್ಘಾಟಿಸಿ ಅವರು ಮಾತನಾಡಿದರು.

'ರಾಜಕಾರಣಿಯೋ, ಅಧಿಕಾರಿಯೋ ಆದರೆ ಅದು ಸಾಧನೆಯಲ್ಲ. ಅಧಿಕಾರ ಸಿಕ್ಕರೆ ಡಿ.ದೇವರಾಜ ಅರಸು ಅವರ ದೂರದೃಷ್ಟಿಯ ವಿಚಾರಗಳನ್ನು ಚಾಚೂತಪ್ಪದೆ ಜಾರಿಗೆ ತರಬೇಕು. ಅವರ ಆದರ್ಶಗಳನ್ನು ಪಾಲಿಸಬೇಕು‌. ಅಂದಾಗ ಮಾತ್ರ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ದುರ್ಬಲರಾದವರನ್ನು ಸಬನಲರನ್ನಾಗಿಸಲು ಸಾಧ್ಯ' ಎಂದರು.

'ಅರಸು ಅವರ ಸಾಮಾಜಿಕ ಕ್ರಾಂತಿಯೇ ಹಿಂದುಳಿದವರು ನಿಶ್ಚಿಂತ ಬದುಕು ಕಟ್ಟಿಕೊಳ್ಳಲು ಕಾರಣವಾಗಿದೆ' ಎಂದರು.

'ಅರಸು ಮಾದರಿಯಲ್ಲೇ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಗುತ್ತಿದ್ದಾರೆ. ಅವರ ಆಡಳಿತದಲ್ಲಿ ಅರಸು ಚಿಂತನೆಗಳು ಕಾರ್ಯರೂಪಕ್ಕೆ ಬರುತ್ತಿವೆ' ಎಂದು ಮುಖ್ಯಮಂತ್ರಿ ಅವರನ್ನು ಕೊಂಡಾಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಸತೀಶ ಸೈಲ್ ಅಧ್ಯಕ್ಷತೆ ವಹಿಸಿದ್ದರು. ಕುಮಾರ ಸೋಮಲಿಂಗಪ್ಪ ಡಿ.ದೇವರಾಜ ಅರಸು ಜೀವನ, ಚಿಂತನೆ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್, ಜಿಲ್ಲಾ ಪಂಚಾಯ್ತಿ ಸಿಇಒ ಈಶ್ವರ ಕಾಂದೂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ತಹಶೀಲ್ದಾರ್ ನಿಶ್ಚಲ್ ನೊರೋನಾ, ನಗರಸಭೆ ಸದಸ್ಯ ಹನುಮಂತ ತಳವಾರ, ದೀಪಕ್ ಕುಡಾಳಕರ್, ಎಲಿಷಾ ಯಲಕಪಾಟಿ, ಜಿ.ಡಿ.ಮನೋಜೆ, ಬಾಬು ಅಂಬಿಗ, ಇತರರು ಇದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ.ಸತೀಶ್ ಸ್ವಾಗತಿಸಿದರು.

ಮೆರವಣಿಗೆ:

ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಡಿ.ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆ ನಡೆಯಿತು. ಸುಗ್ಗಿ ಕುಣಿತ, ಡೊಳ್ಳು ಕುಣಿತ ಸೇರಿದಂತೆ ಹಲವು ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಸುಮಾರು ಮೂರು ಕಿ.ಮೀ ದೂರದವರೆಗೆ ಮೆರವಣಿಗೆ ಕ್ರಮಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT