<p><strong>ಕಾರವಾರ: </strong>ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗೆಶುಕ್ರವಾರ ದಿಢೀರ್ ಭೇಟಿ ನೀಡಿದಶಾಸಕಿ ರೂಪಾಲಿ ಎಸ್.ನಾಯ್ಕ, ಅಲ್ಲಿನ ಅವ್ಯವಸ್ಥೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮಧ್ಯಾಹ್ನ 12.30ರ ಸುಮಾರಿಗೆ ಅವರು ಭೇಟಿ ನೀಡಿದಾಗ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಯಾರೂ ಇರಲಿಲ್ಲ. ಕರೆ ಮಾಡಿದರೂ ಬರಲಿಲ್ಲ. ಇದರ ವಿರುದ್ಧ ಶಾಸಕಿ ಸಿಟ್ಟಾದರು.</p>.<p>ಇದೇ ಕಚೇರಿಯಲ್ಲಿ ಟೈಪಿಸ್ಟ್ ಆಗಿದ್ದ ನೀಲಂಗಜನೀಕರ್ ನಿವೃತ್ತರಾಗಿ ಏಳು ವರ್ಷಗಳೇ ಕಳೆದವು. ಆದರೆ, ಅವರಿಗೆ ಇನ್ನೂ ಪಿಂಚಣಿ ನೀಡುತ್ತಿಲ್ಲ. ಈ ಬಗ್ಗೆ ಸಾಕಷ್ಟು ಅಲೆದಾಟ ನಡೆಸಿದರೂ ಇದುವರೆಗೆಸಮಸ್ಯೆ ಪರಿಹಾರಕಾಣಲಿಲ್ಲ. ಇದನ್ನು ಕೂಡಲೇಇತ್ಯರ್ಥಗೊಳಿಸಬೇಕು ಎಂದು ಕಚೇರಿಯಲ್ಲಿದ್ದ ಗುತ್ತಿಗೆ ನೌಕರರಿಗೆ ತಾಕೀತು ಮಾಡಿದರು.</p>.<p>ಕಾರವಾರ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಮನೆ ನಿರ್ಮಿಸಲು ಪ್ರಾಧಿಕಾರದಿಂದ ಅನುಮತಿಯ ಸರಳೀಕರಣ ಹಾಗೂ ಸ್ಥಳ ವಿನ್ಯಾಸ ನಕ್ಷೆ ಕುರಿತು ಚರ್ಚಿಸುವ ಉದ್ದೇಶದಿಂದ ರೂಪಾಲಿ ಭೇಟಿ ನೀಡಿದ್ದರು.</p>.<p>ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಜನಸಾಮಾನ್ಯರು ಮನೆ ನಿರ್ಮಿಸಲು ಹತ್ತು ಹಲವು ಕಾನೂನುಗಳನ್ನು ಅಧಿಕಾರಿಗಳು ಹೇಳುತ್ತಾರೆ. ಆದರೆ, 5–6 ಅಂತಸ್ತುಗಳ ಅಪಾರ್ಟ್ಮೆಂಟ್ಗಳನ್ನು ನಿರ್ಮಿಸಲು ಹೇಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಯುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗೆಶುಕ್ರವಾರ ದಿಢೀರ್ ಭೇಟಿ ನೀಡಿದಶಾಸಕಿ ರೂಪಾಲಿ ಎಸ್.ನಾಯ್ಕ, ಅಲ್ಲಿನ ಅವ್ಯವಸ್ಥೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮಧ್ಯಾಹ್ನ 12.30ರ ಸುಮಾರಿಗೆ ಅವರು ಭೇಟಿ ನೀಡಿದಾಗ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಯಾರೂ ಇರಲಿಲ್ಲ. ಕರೆ ಮಾಡಿದರೂ ಬರಲಿಲ್ಲ. ಇದರ ವಿರುದ್ಧ ಶಾಸಕಿ ಸಿಟ್ಟಾದರು.</p>.<p>ಇದೇ ಕಚೇರಿಯಲ್ಲಿ ಟೈಪಿಸ್ಟ್ ಆಗಿದ್ದ ನೀಲಂಗಜನೀಕರ್ ನಿವೃತ್ತರಾಗಿ ಏಳು ವರ್ಷಗಳೇ ಕಳೆದವು. ಆದರೆ, ಅವರಿಗೆ ಇನ್ನೂ ಪಿಂಚಣಿ ನೀಡುತ್ತಿಲ್ಲ. ಈ ಬಗ್ಗೆ ಸಾಕಷ್ಟು ಅಲೆದಾಟ ನಡೆಸಿದರೂ ಇದುವರೆಗೆಸಮಸ್ಯೆ ಪರಿಹಾರಕಾಣಲಿಲ್ಲ. ಇದನ್ನು ಕೂಡಲೇಇತ್ಯರ್ಥಗೊಳಿಸಬೇಕು ಎಂದು ಕಚೇರಿಯಲ್ಲಿದ್ದ ಗುತ್ತಿಗೆ ನೌಕರರಿಗೆ ತಾಕೀತು ಮಾಡಿದರು.</p>.<p>ಕಾರವಾರ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಮನೆ ನಿರ್ಮಿಸಲು ಪ್ರಾಧಿಕಾರದಿಂದ ಅನುಮತಿಯ ಸರಳೀಕರಣ ಹಾಗೂ ಸ್ಥಳ ವಿನ್ಯಾಸ ನಕ್ಷೆ ಕುರಿತು ಚರ್ಚಿಸುವ ಉದ್ದೇಶದಿಂದ ರೂಪಾಲಿ ಭೇಟಿ ನೀಡಿದ್ದರು.</p>.<p>ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಜನಸಾಮಾನ್ಯರು ಮನೆ ನಿರ್ಮಿಸಲು ಹತ್ತು ಹಲವು ಕಾನೂನುಗಳನ್ನು ಅಧಿಕಾರಿಗಳು ಹೇಳುತ್ತಾರೆ. ಆದರೆ, 5–6 ಅಂತಸ್ತುಗಳ ಅಪಾರ್ಟ್ಮೆಂಟ್ಗಳನ್ನು ನಿರ್ಮಿಸಲು ಹೇಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಯುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>