ಡಯಾಲಿಸಿಸ್ ಘಟಕದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ವೇತನ ಆಗದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬುಧವಾರ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪಂಡಿತ ಸಾರ್ವಜನಿಕ ಆಸ್ಪತ್ರೆ ಡಯಾಲಿಸಿಸ್ ಸಿಬ್ಬಂದಿ ಕರೆಸಿ ಮಾತನಾಡಿದ ಭೀಮಣ್ಣ, ರೋಗಿಗಳನ್ನು ಕುಟುಂಬದವರಂತೆ ನೋಡಬೇಕು. ವೇತನ ಬರದ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಲು ನಮ್ಮ ವಿರೋಧವಿಲ್ಲ. ಆದರೆ, ಇಲ್ಲಿಯ ರೋಗಿಗಳಿಗೆ ತೊಂದರೆ ಆಗುವುದರಿಂದ ಕಾರ್ಯ ನಿರ್ವಹಣೆಯಲ್ಲಿ ವ್ಯತ್ಯಯ ಮಾಡದಂತೆ ಸೂಚನೆ ನೀಡಿದರು. ಜತೆ, ವೇತನ ಆಗುವವರೆಗೂ ಆಸ್ಪತ್ರೆಯಿಂದಲೇ ಆರ್ಥಿಕ ಸಹಾಯ ಒದಗಿಸಲಾಗುವುದು. ವೇತನ ಆದ ಬಳಿಕ ಈ ಹಣವನ್ನು ಆಸ್ಪತ್ರೆಗೆ ವಾಪಸ್ ಮಾಡುವಂತೆ ಸಿಬ್ಬಂದಿಗೆ ಸೂಚಿಸಿದರು.