‘ವಸತಿ ನಿಲಯಕ್ಕೆ ನೀರು, ವಿದ್ಯುತ್ ಸಂಪರ್ಕದ ವ್ಯವಸ್ಥೆ ಆಗಬೇಕಿದೆ. ಈ ಸೌಲಭ್ಯ ಕಲ್ಪಿಸಲು ಅನುದಾನ ಲಭ್ಯವಿದ್ದು ಕಾಮಗಾರಿಗೆ ಅನುಮೋದನೆ ನೀಡಲಾಗುವುದು. ರಸ್ತೆ ಸಂಪರ್ಕಕ್ಕೆ ಸುಮಾರು ₹30 ಲಕ್ಷ ವೆಚ್ಚದಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಿದ್ದು ಶಾಸಕರ ವಿಶೇಷ ಅನುದಾನಕ್ಕೆ ಕೋರಲಾಗಿದೆ. ಎಲ್ಲ ಸೌಲಭ್ಯ ಕಲ್ಪಿಸಿ ಮುಂಬರುವ ಶೈಕ್ಷಣಿಕ ವರ್ಷದ ಒಳಗೆ ವಸತಿ ನಿಲಯ ಕಾರ್ಯಾರಂಭಕ್ಕೆ ಕ್ರಮ ವಹಿಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಪ್ರತಿಕ್ರಿಯಿಸಿದರು.