ಮಂಡಲ ಉಪಾಧ್ಯಕ್ಷ ಕೆ.ವರದ ಮಾತನಾಡಿ, ‘ಸ್ಥಳೀಯ ಕೆಲವು ಕಾಂಗ್ರೆಸ್ ನಾಯಕರು ಮಾಜಿ ಶಾಸಕರ ಬಗ್ಗೆ ಅವಹೇಳನವಾಗಿ ಮಾತನಾಡುತ್ತಿರುವುದು ಖಂಡನೀಯ. 25 ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿದ ಅವರು ಕ್ಷೇತ್ರದಲ್ಲಿ ಪ್ರವಾಹ, ಪ್ರಕೃತಿ ವಿಕೋಪ, ಕೋವಿಡ್ ಸಂದರ್ಭ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ’ ಎಂದು ಹೇಳಿದರು.