ಹಳಿಯಾಳ: ‘ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿದೆ. ಸೌಲಭ್ಯ ಸದುಪಯೋಗವಾಗಬೇಕೆ ಹೊರತು, ಉಚಿತ ಎಂದು ಅನಗತ್ಯ ಓಡಾಟ ನಡೆಸಬಾರದು’ ಎಂದು ಶಾಸಕ ಆರ್.ವಿ.ದೇಶಪಾಂಡೆ ಸಲಹೆ ನೀಡಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ಭಾನುವಾರ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಶಕ್ತಿ ಯೋಜನೆಗೆ ಚಾಲನೆ ನೀಡಿ, ‘ಚುನಾವಣೆ ಪೂರ್ವದಲ್ಲಿ ತಿಳಿಸಿದಂತೆ ಎಲ್ಲ ಗ್ಯಾರೆಂಟಿ ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೆ ತರಲು ಸರ್ಕಾರ ಬದ್ಧವಿದೆ’ ಎಂದರು.
ಮುಖಂಡರಾದ ಅಜರ ಬಸರಿಕಟ್ಟಿ ,ಪುರಸಭೆಯ ಕಾಂಗ್ರೆಸ್ ಬೆಂಬಲಿತ ಸದಸ್ಯರು, ಘಟಕ ವ್ಯವಸ್ಥಾಪಕ ಗಣೇಶ ಜವಳಿ, ವಿಭಾಗೀಯ ಅಂಕೆ ಸಂಖ್ಯೆ ಅಧಿಕಾರಿ ಇಸ್ಮಾಯಿಲ್ ನವಲಗುಂದ, ಸಂಚಾರ ನೀರಿಕ್ಷಕ ಸಿದ್ದಪ್ಪಾ ನಾಗಣಿ , ಸಿಬ್ಬಂದಿಗಳು ಹಾಗೂ ಪ್ರಯಾಣಿಕರು ಉಪಸ್ಥಿತರಿದ್ದರು.
ಹಳಿಯಾಳದಲ್ಲಿ ಶಾಸಕ ಆರ್ ವಿ ದೇಶಪಾಂಡೆ ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆಗೆ ಚಾಲನೆ ನೀಡಿ ನಂತರ ಪ್ರಯಾಣಿಕರೊಂದಿಗೆ ಮಾತನಾಡಿದರು.
ಹಳಿಯಾಳದಲ್ಲಿ ಶಾಸಕ ಆರ್ ವಿ ದೇಶಪಾಂಡೆ ಮಹಿಳೆಯರ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆಗೆ ಚಾಲನೆ ನೀಡಿ ನಂತರ ಪ್ರಯಾಣಿಕರಿಗೆ ಸನ್ಮಾನಿಸಿ ಪ್ರಯಾಣಕ್ಕೆ ಶುಭ ಕೋರಿದರು.