ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಆಧುನಿಕ ತಂತ್ರಜ್ಞಾನಗಳಿರುವ ಆಸ್ಪತ್ರೆಯೊಂದನ್ನು ಜಿಲ್ಲೆಯಲ್ಲಿ ನಿರ್ಮಾಣ ಮಾಡುವಂತೆ ಮುಖ್ಯಮಂತ್ರಿಗೆಶುಕ್ರವಾರ ಬೆಂಗಳೂರಿನಲ್ಲಿ ಮನವಿ ನೀಡಿದ್ದೆ.ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆಯ ಅಗತ್ಯದ ಬಗ್ಗೆ ಅವರಿಗೆ ವಿವರಿಸಿದ್ದೆ. ಅಲ್ಲದೇ ಆರೋಗ್ಯ ಇಲಾಖೆ ಮತ್ತು ಜಿಲ್ಲಾಧಿಕಾರಿ ಕಚೇರಿಯಿಂದಲೂ ಮುಖ್ಯಮಂತ್ರಿ ಕಾರ್ಯಾಲಯಕ್ಕೆ ಪತ್ರ ಕಳುಹಿಸಲಾಗಿದೆ. ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ’ ಎಂದು ಅವರು ಮಾಹಿತಿ ನೀಡಿದರು.