‘ನಷ್ಟದ ಭಯದಿಂದ ಜನತೆ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಯುವಕರು ಕೃಷಿ ಬಿಟ್ಟ ಪರಿಣಾಮ ಭೂಮಿ ಬಂಜರಾಗುತ್ತಿದೆ. ಲಾಕ್ಡೌನ್ ಸಂದರ್ಭದಲ್ಲಿ ಆಹಾರ ಮತ್ತು ಕೃಷಿ ಅಗತ್ಯ ಜನರಿಗೆ ಅರ್ಥವಾಗಿದೆ. ತಾಲ್ಲೂಕಿನ ಕೃಷಿ ವಿಧಾನದಲ್ಲಿ ಬದಲಾವಣೆ ತರಲು ಮತ್ತು ರೈತರನ್ನು ಉತ್ತೇಜಿಸಲು ಈ ಪ್ರಯತ್ನ ಆರಂಭಿಸಿದ್ದೇನೆ. ಇದು ನನ್ನ ಕನಸಿನ ಕೂಸು. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಎಪಿಎಂಸಿ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಿ, ಸ್ಥಳೀಯ ರೈತರಿಗೆ ಹೆಚ್ಚಿನ ಸೌಲಭ್ಯ ಸಿಗುವಂತೆ ಪ್ರಯತ್ನಿಸುತ್ತೇವೆ’ ಎಂದು ಶಾಸಕಿ ರೂಪಾಲಿ ಹೇಳಿದರು.