<p><strong>ಕಾರವಾರ: ‘</strong>ಶಿಕ್ಷಣ ಸ್ವಾವಲಂಬನೆಯೊಂದಿಗೆ ಬದುಕಲು ದಾರಿ ಮಾಡಿಕೊಡುತ್ತದೆ. ಮಹಿಳೆಯರು ಸುಶಿಕ್ಷಿತರಾದರೆ ಸಮಾಜವೂ ಪರಿಣಾಮಕಾರಿ ಸುಧಾರಣೆ ಕಾಣುತ್ತದೆ’ ಎಂದು ಶಾಸಕ ಸತೀಶ ಸೈಲ್ ಹೇಳಿದರು.</p>.<p>ಇಲ್ಲಿನ ಡಿಪ್ಲೊಮಾ ಕಾಲೇಜು ಕಟ್ಟಡದ ಹಿಂಭಾಗದಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳಾ ಕಾಲೇಜಿಗೆ ಹೊಸ ಕಟ್ಟಡವನ್ನು 2017–18ರಲ್ಲಿಯೇ ಮಂಜೂರು ಮಾಡಿಸಿಕೊಂಡು ಬಂದಿದ್ದೆ. ಐದು ವರ್ಷಗಳ ಬಳಿಕ ಕಟ್ಟಡ ನಿರ್ಮಾಣ ಕೆಲಸ ಆರಂಭಗೊಂಡಿತ್ತು. ಕಾಲೇಜಿಗೆ ಅಗತ್ಯವಿರುವ ಕಾಂಪೌಂಡ್, ಹೆಚ್ಚುವರಿ ಕೊಠಡಿಗಳನ್ನು ಶೀಘ್ರದಲ್ಲಿ ಮಂಜೂರು ಮಾಡಿಸಲಾಗುವುದು’ ಎಂದರು.</p>.<p>ಈ ಕಾರ್ಯಕ್ರಮಕ್ಕೆ ಮುನ್ನ ಅವರು ನೂತನವಾಗಿ ನಿರ್ಮಾಣಗೊಂಡ ಲೋಕೋಪಯೋಗಿ ಇಲಾಖೆಯ ಸರ್ಕಿಟ್ ಹೌಸ ಕಟ್ಟಡ ಉದ್ಘಾಟಿಸಿದರು.</p>.<p>ತಹಶೀಲ್ದಾರ್ ನಿಶ್ಚಲ್ ನೊರ್ಹೋನಾ, ನಗರಸಭೆ ಪೌರಾಯುಕ್ತ ಜಗದೀಶ ಹುಲಗೆಜ್ಜಿ, ಪಿಡಬ್ಲ್ಯೂಡಿ ಇಇ ಎಚ್.ಆರ್. ಚಂದ್ರಶೇಖರ್, ಎಇಇ ರಾಮು ಅರ್ಗೇಕರ್, ಮಹಿಳಾ ಕಾಲೇಜಿನ ಪ್ರಾಚಾರ್ಯ ವಿ.ಜಿ. ಗಣೇಶ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: ‘</strong>ಶಿಕ್ಷಣ ಸ್ವಾವಲಂಬನೆಯೊಂದಿಗೆ ಬದುಕಲು ದಾರಿ ಮಾಡಿಕೊಡುತ್ತದೆ. ಮಹಿಳೆಯರು ಸುಶಿಕ್ಷಿತರಾದರೆ ಸಮಾಜವೂ ಪರಿಣಾಮಕಾರಿ ಸುಧಾರಣೆ ಕಾಣುತ್ತದೆ’ ಎಂದು ಶಾಸಕ ಸತೀಶ ಸೈಲ್ ಹೇಳಿದರು.</p>.<p>ಇಲ್ಲಿನ ಡಿಪ್ಲೊಮಾ ಕಾಲೇಜು ಕಟ್ಟಡದ ಹಿಂಭಾಗದಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳಾ ಕಾಲೇಜಿಗೆ ಹೊಸ ಕಟ್ಟಡವನ್ನು 2017–18ರಲ್ಲಿಯೇ ಮಂಜೂರು ಮಾಡಿಸಿಕೊಂಡು ಬಂದಿದ್ದೆ. ಐದು ವರ್ಷಗಳ ಬಳಿಕ ಕಟ್ಟಡ ನಿರ್ಮಾಣ ಕೆಲಸ ಆರಂಭಗೊಂಡಿತ್ತು. ಕಾಲೇಜಿಗೆ ಅಗತ್ಯವಿರುವ ಕಾಂಪೌಂಡ್, ಹೆಚ್ಚುವರಿ ಕೊಠಡಿಗಳನ್ನು ಶೀಘ್ರದಲ್ಲಿ ಮಂಜೂರು ಮಾಡಿಸಲಾಗುವುದು’ ಎಂದರು.</p>.<p>ಈ ಕಾರ್ಯಕ್ರಮಕ್ಕೆ ಮುನ್ನ ಅವರು ನೂತನವಾಗಿ ನಿರ್ಮಾಣಗೊಂಡ ಲೋಕೋಪಯೋಗಿ ಇಲಾಖೆಯ ಸರ್ಕಿಟ್ ಹೌಸ ಕಟ್ಟಡ ಉದ್ಘಾಟಿಸಿದರು.</p>.<p>ತಹಶೀಲ್ದಾರ್ ನಿಶ್ಚಲ್ ನೊರ್ಹೋನಾ, ನಗರಸಭೆ ಪೌರಾಯುಕ್ತ ಜಗದೀಶ ಹುಲಗೆಜ್ಜಿ, ಪಿಡಬ್ಲ್ಯೂಡಿ ಇಇ ಎಚ್.ಆರ್. ಚಂದ್ರಶೇಖರ್, ಎಇಇ ರಾಮು ಅರ್ಗೇಕರ್, ಮಹಿಳಾ ಕಾಲೇಜಿನ ಪ್ರಾಚಾರ್ಯ ವಿ.ಜಿ. ಗಣೇಶ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>