ಮುಂಡಗೋಡ: ಪಟ್ಟಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ 536ನೇ ಕನಕದಾಸ ಜಯಂತ್ಯುತ್ಸವ ಹಾಗೂ ಜಿಲ್ಲಾ ಮಟ್ಟದ ವೀರ ವನಿತೆ ಒನಕೆ ಓಬವ್ವ ಜಯಂತ್ಯುತ್ಸವದ ಮೆರವಣಿಗೆಯಲ್ಲಿ ಶಾಸಕ ಶಿವರಾಮ ಹೆಬ್ಬಾರ ಅವರು ಪಾಲ್ಗೊಂಡು, ಡೊಳ್ಳು ಕುಣಿತಕ್ಕೆ ತಾಳ ಬಾರಿಸುತ್ತ ಹೆಜ್ಜೆ ಹಾಕಿದರು.
ಶಾಸಕ ಶಿವರಾಮ ಹೆಬ್ಬಾರ ಕುಣಿತದಿಂದ ಪುಳಕಿತರಾದ ನೆರೆದವರು ಸಹ ಕೆಲ ಹೊತ್ತು ಕುಣಿದು ಸಂಭ್ರಮಿಸಿದರು. ತಹಶೀಲ್ದಾರ್ ಶಂಕರ ಗೌಡಿ ಹಾಗೂ ಜನಪ್ರತಿನಿಧಿಗಳು ಇದ್ದರು.