<p>ಕಾರವಾರ: ‘ತಂತ್ರಜ್ಞಾನ ಬೆಳೆದಂತೆ ದುರುಪಯೋಗ, ವಂಚನೆ ಹೆಚ್ಚುತ್ತಿದೆ. ಮೊಬೈಲ್ ಬಳಕೆ ವೇಳೆ ಪ್ರತಿ ಕ್ಷಣ ಎಚ್ಚರಿಕೆಯಿಂದ ಇರಬೇಕು’ ಎಂದು ಜಿಲ್ಲಾ ಪಂಚಾಯಿತಿ ಆಡಳಿತ ವಿಭಾಗದ ಉಪ ಕಾರ್ಯದರ್ಶಿ ಎಂ.ಎಸ್.ಅಲ್ಲಾಭಕ್ಷ್ ಹೇಳಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸುರಕ್ಷಿತ ಅಂತರ್ಜಾಲ ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ಮಕ್ಕಳು ಮೊಬೈಲ್ ಬಳಸುವಾಗ ವಂಚಕರು ಆಸೆ, ಅಮಿಷಗಳನ್ನು ಒಡ್ಡಿ ಕಳುಹಿಸುವ ಸಂದೇಶಗಳನ್ನು ಅರಿಯದೆ ಲಿಂಕ್ಗಳಿಗೆ ಪ್ರವೇಶ ಮಾಡುವುದರಿಂದ ವಂಚನೆ ಪ್ರಕರಣ ಹೆಚ್ಚುತ್ತಿದೆ. ಮೊಬೈಲ್ನಿಂದ ಮಕ್ಕಳನ್ನು ದೂರವಿಡಬೇಕು’ ಎಂದರು.</p>.<p>ಸಿಇಎನ್ ಅಪರಾಧ ಪೊಲೀಸ್ ವಿಭಾಗದ ಡಿಎಸ್ಪಿ ಬಿ.ಅಶ್ವಿನಿ ಮಾತನಾಡಿ, ‘ಕೃತಕ ಬುದ್ದಿಮತ್ತೆ (ಎಐ) ಬಗ್ಗೆ ಜಾಗೃತರಾಗಬೇಕು. ಎಐ ಸಂಬಂಧಿತ ಅಪಾಯಗಳನ್ನು ಪ್ರತಿಯೊಬ್ಬರಿಗೂ ಸಂಪೂರ್ಣವಾಗಿ ಅರಿತುಕೊಳ್ಳಬೇಕು. ಯುಪಿಐ ಪೇಮೆಂಟ್ ಪಾವತಿಸುವಾಗ ಹಣ ವರ್ಗಾಯಿಸುವ ಸಂಖ್ಯೆ ಮತ್ತು ಲಿಂಕ್ ಅಧಿಕೃತವಾಗಿ ಖಚಿತ ಪಡಿಸಿಕೊಳ್ಳಿ’ ಎಂದರು.</p>.<p>ಜಿಲ್ಲಾ ಮಾಹಿತಿ ಕೇಂದ್ರದ ಅಧಿಕಾರಿ ಸಾಯಿ ಸಾಗರ ಜಲ್ಲು ಸುರಕ್ಷಿತ ಅಂತರ್ಜಾಲದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ಹಲಮ್ಮನವರ, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬಿಬ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ‘ತಂತ್ರಜ್ಞಾನ ಬೆಳೆದಂತೆ ದುರುಪಯೋಗ, ವಂಚನೆ ಹೆಚ್ಚುತ್ತಿದೆ. ಮೊಬೈಲ್ ಬಳಕೆ ವೇಳೆ ಪ್ರತಿ ಕ್ಷಣ ಎಚ್ಚರಿಕೆಯಿಂದ ಇರಬೇಕು’ ಎಂದು ಜಿಲ್ಲಾ ಪಂಚಾಯಿತಿ ಆಡಳಿತ ವಿಭಾಗದ ಉಪ ಕಾರ್ಯದರ್ಶಿ ಎಂ.ಎಸ್.ಅಲ್ಲಾಭಕ್ಷ್ ಹೇಳಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸುರಕ್ಷಿತ ಅಂತರ್ಜಾಲ ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ಮಕ್ಕಳು ಮೊಬೈಲ್ ಬಳಸುವಾಗ ವಂಚಕರು ಆಸೆ, ಅಮಿಷಗಳನ್ನು ಒಡ್ಡಿ ಕಳುಹಿಸುವ ಸಂದೇಶಗಳನ್ನು ಅರಿಯದೆ ಲಿಂಕ್ಗಳಿಗೆ ಪ್ರವೇಶ ಮಾಡುವುದರಿಂದ ವಂಚನೆ ಪ್ರಕರಣ ಹೆಚ್ಚುತ್ತಿದೆ. ಮೊಬೈಲ್ನಿಂದ ಮಕ್ಕಳನ್ನು ದೂರವಿಡಬೇಕು’ ಎಂದರು.</p>.<p>ಸಿಇಎನ್ ಅಪರಾಧ ಪೊಲೀಸ್ ವಿಭಾಗದ ಡಿಎಸ್ಪಿ ಬಿ.ಅಶ್ವಿನಿ ಮಾತನಾಡಿ, ‘ಕೃತಕ ಬುದ್ದಿಮತ್ತೆ (ಎಐ) ಬಗ್ಗೆ ಜಾಗೃತರಾಗಬೇಕು. ಎಐ ಸಂಬಂಧಿತ ಅಪಾಯಗಳನ್ನು ಪ್ರತಿಯೊಬ್ಬರಿಗೂ ಸಂಪೂರ್ಣವಾಗಿ ಅರಿತುಕೊಳ್ಳಬೇಕು. ಯುಪಿಐ ಪೇಮೆಂಟ್ ಪಾವತಿಸುವಾಗ ಹಣ ವರ್ಗಾಯಿಸುವ ಸಂಖ್ಯೆ ಮತ್ತು ಲಿಂಕ್ ಅಧಿಕೃತವಾಗಿ ಖಚಿತ ಪಡಿಸಿಕೊಳ್ಳಿ’ ಎಂದರು.</p>.<p>ಜಿಲ್ಲಾ ಮಾಹಿತಿ ಕೇಂದ್ರದ ಅಧಿಕಾರಿ ಸಾಯಿ ಸಾಗರ ಜಲ್ಲು ಸುರಕ್ಷಿತ ಅಂತರ್ಜಾಲದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ಹಲಮ್ಮನವರ, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬಿಬ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>