‘ಕುಕ್ಕರ್ ಸ್ಫೋಟ ಮಾಡಿದವರನ್ನು ಬ್ರದರ್ಸ್ ಎಂದು ಕರೆಯುವ ಕಾಂಗ್ರೆಸ್ ಪಕ್ಷದವರು, ದುಷ್ಕೃತ್ಯ ಮಾಡುವವರನ್ನು ರಕ್ಷಣೆ ಮಾಡಿ ಉಳಿಸುವ ಪ್ರಯತ್ನ ಮಾಡಿದಂತಾಗುತ್ತದೆ. ಇದರಿಂದ ಮತ್ತಷ್ಟು ದುಷ್ಕೃತ್ಯಗಳು ನಡೆಯುವ ಸಾಧ್ಯತೆ ಇರುತ್ತದೆ. ಆದರೆ ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಕೆಲವೇ ದಿನಗಳಲ್ಲಿ ಬಂಧಿಸಲಾಯಿತು. ಇಲ್ಲಿ ಬಾಂಬ್ ಸ್ಫೋಟ ಮಾಡಿದವರು ತಪ್ಪಿಸಿಕೊಂಡು ಹೋಗಲು ಸಾಧ್ಯವಿಲ್ಲ ಎನ್ನುವ ಸಂದೇಶ ಹೋದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ’ ಎಂದರು.