<p>ಕಾರವಾರ: ‘ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ 72 ಗಂಟೆ ಅವಧಿಯಲ್ಲಿ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಖಾಸಗಿ ಒಡೆತನದಲ್ಲಿರುವ ಸ್ಥಳ, ಕಟ್ಟಡಗಳ ಮೇಲೆ ಪ್ರಕಟಿಸಲಾಗಿದ್ದ ವಿವಿಧ ರೀತಿಯ ಪ್ರಚಾರ ಹಾಗೂ ಮತದಾರರ ಮೇಲೆ ಪ್ರಭಾವ ಬೀರುವಂತಹ ಸುಮಾರು 1,272 ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.</p>.<p>‘ಚುನಾವಣಾ ಆಯೋಗದ ನಿರ್ದೇಶನದಂತೆ ಮಾದರಿ ನೀತಿ ಸಂಹಿತೆ ಜಾರಿಯಾದ ಮರುಕ್ಷಣದಿಂದಲೇ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮಗಳಲ್ಲಿನ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳ, ಕಟ್ಟಡಗಳಲ್ಲಿ ಅಳವಡಿಸಿದ್ದ ಬ್ಯಾನರ್, ಬಂಟಿಂಗ್ಸ್, ಭಿತ್ತಿಚಿತ್ರಗಳು, ಗೋಡೆ ಬರಹಗಳನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>‘251 ಗೋಡೆ ಬರಹಗಳು, 349 ಭಿತ್ತಿಚಿತ್ರಗಳು, 255 ಬ್ಯಾನರ್ಗಳು ಹಾಗೂ 417 ಇತರ ಪ್ರಚಾರ ವ್ಯವಸ್ಥೆಗಳನ್ನು ತೆರವು ಮಾಡಲಾಗಿದೆ. ಒಟ್ಟು 33 ತಂಡಗಳು ತೆರವು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು’ ಎಂದು ತಿಳಿಸಿದ್ದಾರೆ.</p>.<p>‘ಜೋಯಿಡಾ ತಾಲ್ಲೂಕಿನಲ್ಲಿ 96, ದಾಂಡೇಲಿಯಲ್ಲಿ 69, ಹಳಿಯಾಳದಲ್ಲಿ 85, ಕಾರವಾರದಲ್ಲಿ 229, ಅಂಕೋಲಾದಲ್ಲಿ 81, ಕುಮಟಾದಲ್ಲಿ 120, ಹೊನ್ನಾವರದಲ್ಲಿ 192, ಭಟ್ಕಳದಲ್ಲಿ 49, ಶಿರಸಿಯಲ್ಲಿ 152, ಸಿದ್ದಾಪುರದಲ್ಲಿ 65, ಯಲ್ಲಾಪುರದಲ್ಲಿ 86 ಹಾಗೂ ಮುಂಡಗೋಡದಲ್ಲಿ 48 ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಲಾಗಿದೆ’ ಎಂದು ವಿವರಿಸಿದ್ದಾರೆ.</p>.<p>‘ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರದ ಜಾಹೀರಾತುಗಳನ್ನು ನೀಡಲು ಜಿಲ್ಲಾ ಮಾಧ್ಯಮ ಮಾನ್ಯತೆ ಮತ್ತು ಮೇಲುಸ್ತುವಾರಿ ಸಮಿತಿ (ಎಂ.ಸಿ.ಎಂ.ಸಿ) ಪೂರ್ವಾನುಮತಿಯನ್ನು ಪಡೆಯುವುದು ಕಡ್ಡಾಯವಾಗಿದ್ದು, ಇದನ್ನು ಉಲ್ಲಂಘಿಸಿಸುವವರ ವಿರುದ್ಧ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳಲಾಗುವುದು’ ಎಂದೂ ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ‘ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ 72 ಗಂಟೆ ಅವಧಿಯಲ್ಲಿ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಖಾಸಗಿ ಒಡೆತನದಲ್ಲಿರುವ ಸ್ಥಳ, ಕಟ್ಟಡಗಳ ಮೇಲೆ ಪ್ರಕಟಿಸಲಾಗಿದ್ದ ವಿವಿಧ ರೀತಿಯ ಪ್ರಚಾರ ಹಾಗೂ ಮತದಾರರ ಮೇಲೆ ಪ್ರಭಾವ ಬೀರುವಂತಹ ಸುಮಾರು 1,272 ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.</p>.<p>‘ಚುನಾವಣಾ ಆಯೋಗದ ನಿರ್ದೇಶನದಂತೆ ಮಾದರಿ ನೀತಿ ಸಂಹಿತೆ ಜಾರಿಯಾದ ಮರುಕ್ಷಣದಿಂದಲೇ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮಗಳಲ್ಲಿನ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳ, ಕಟ್ಟಡಗಳಲ್ಲಿ ಅಳವಡಿಸಿದ್ದ ಬ್ಯಾನರ್, ಬಂಟಿಂಗ್ಸ್, ಭಿತ್ತಿಚಿತ್ರಗಳು, ಗೋಡೆ ಬರಹಗಳನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>‘251 ಗೋಡೆ ಬರಹಗಳು, 349 ಭಿತ್ತಿಚಿತ್ರಗಳು, 255 ಬ್ಯಾನರ್ಗಳು ಹಾಗೂ 417 ಇತರ ಪ್ರಚಾರ ವ್ಯವಸ್ಥೆಗಳನ್ನು ತೆರವು ಮಾಡಲಾಗಿದೆ. ಒಟ್ಟು 33 ತಂಡಗಳು ತೆರವು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು’ ಎಂದು ತಿಳಿಸಿದ್ದಾರೆ.</p>.<p>‘ಜೋಯಿಡಾ ತಾಲ್ಲೂಕಿನಲ್ಲಿ 96, ದಾಂಡೇಲಿಯಲ್ಲಿ 69, ಹಳಿಯಾಳದಲ್ಲಿ 85, ಕಾರವಾರದಲ್ಲಿ 229, ಅಂಕೋಲಾದಲ್ಲಿ 81, ಕುಮಟಾದಲ್ಲಿ 120, ಹೊನ್ನಾವರದಲ್ಲಿ 192, ಭಟ್ಕಳದಲ್ಲಿ 49, ಶಿರಸಿಯಲ್ಲಿ 152, ಸಿದ್ದಾಪುರದಲ್ಲಿ 65, ಯಲ್ಲಾಪುರದಲ್ಲಿ 86 ಹಾಗೂ ಮುಂಡಗೋಡದಲ್ಲಿ 48 ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಲಾಗಿದೆ’ ಎಂದು ವಿವರಿಸಿದ್ದಾರೆ.</p>.<p>‘ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರದ ಜಾಹೀರಾತುಗಳನ್ನು ನೀಡಲು ಜಿಲ್ಲಾ ಮಾಧ್ಯಮ ಮಾನ್ಯತೆ ಮತ್ತು ಮೇಲುಸ್ತುವಾರಿ ಸಮಿತಿ (ಎಂ.ಸಿ.ಎಂ.ಸಿ) ಪೂರ್ವಾನುಮತಿಯನ್ನು ಪಡೆಯುವುದು ಕಡ್ಡಾಯವಾಗಿದ್ದು, ಇದನ್ನು ಉಲ್ಲಂಘಿಸಿಸುವವರ ವಿರುದ್ಧ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳಲಾಗುವುದು’ ಎಂದೂ ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>