ಜಿಲ್ಲೆಯ ಎಲ್ಲ ಜಲಾಶಯಗಳೂ ವಿದ್ಯುತ್ ಉತ್ಪಾದನೆಗೆಂದೇ ನಿರ್ಮಾಣವಾಗಿವೆ. ಕೋವಿಡ್ ಕಾರಣದಿಂದ ಈ ವರ್ಷವೂ ದೇಶದಾದ್ಯಂತ ಲಾಕ್ಡೌನ್ ಹಾಗೂ ಸೆಮಿ ಲಾಕ್ಡೌನ್ ಮುಂದುವರಿಯಿತು. ಕೈಗಾರಿಕೆಗಳು, ವಿವಿಧ ವಾಣಿಜ್ಯೋದ್ಯಮಗಳು ಕಾರ್ಯನಿರ್ವಹಿಸಲಿಲ್ಲ. ಹಾಗಾಗಿ, ಕಡು ಬೇಸಿಗೆಯಲ್ಲೂ ವಿದ್ಯುತ್ಗೆ ಬೇಡಿಕೆ ಕುಸಿದಿತ್ತು. ಇದರಿಂದ ಜಲಾಶಯಗಳಲ್ಲಿ ವಿದ್ಯುತ್ ಉತ್ಪಾದಿಸುವಂತೆ ಕೇಂದ್ರ ಗ್ರಿಡ್ನಿಂದ ಸೂಚನೆ ಬರಲಿಲ್ಲ. ಹೀಗಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಖರ್ಚಾಗಲಿಲ್ಲ ಎನ್ನುತ್ತಾರೆ ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು.