<p><strong>ಭಟ್ಕಳ: </strong>‘ಮೊಗೇರ ಸಮುದಾಯದರ ಪ್ರತಿಭಟನೆಯ ಕೂಗು ಸರ್ಕಾರಕ್ಕೆ ಮುಟ್ಟಿದೆ. ಸರ್ಕಾರ ಕೂಡ ಈ ಬಗ್ಗೆ ಶೀಘ್ರ ಸಭೆ ನಡೆಸಿ ಸಮಸ್ಯೆ ಇತ್ಯರ್ಥ ಮಾಡುವ ಪ್ರಯತ್ನದಲ್ಲಿದೆ’ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.</p>.<p>ಪರಿಶಿಷ್ಟ ಜಾತಿ ಸೌಲಭ್ಯಕ್ಕಾಗಿ ಪಟ್ಟಣದಲ್ಲಿ ಮೊಗೇರ ಸಮುದಾಯವರು ನಡೆಸುತ್ತಿರುವ ಪ್ರತಿಭಟನೆಯ ಸ್ಥಳಕ್ಕೆ ಮಂಗಳವಾರ ಅವರು ಭೇಟಿ ನೀಡಿ ಮಾತನಾಡಿದರು.</p>.<p>‘ಮೊಗೇರ ಸಮುದಾಯ ಎಸ್.ಸಿ ಸೌಲಭ್ಯ ವಂಚಿತರಾದ ಬಗ್ಗೆ ಹಾಗೂ ವಿವಿಧ ಸ್ಥರಗಳ ತಮ್ಮ ಹಕ್ಕಿಗಾಗಿ ಹೋರಾಟ ನಡೆಸಿದ ಬಗ್ಗೆ ನಮಗೆ ಅರಿವಿದೆ. ಈ ಬಗ್ಗೆ ಮುಖ್ತಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡಿದಾಗ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಜೊತೆ ಮಾತನಾಡಿದ್ದೇನೆ’ ಎಂದರು.</p>.<p>‘ಏ.23ರಂದು ಕಾನೂನು ತಜ್ಞರನ್ನೊಳಗೊಂಡ ಒಂದು ಸಮಿತಿಯು ಸಭೆ ನಡೆಸಲಿದೆ. ಮೊಗೇರರಿಗೆ ಎಸ್.ಸಿ ಸೌಲಭ್ಯ ನೀಡುವ ಸಾಧ್ಯತೆ ಬಗ್ಗೆ ಚರ್ಚಿಸಿ, ಅಗತ್ಯ ದಾಖಲೆಗಳನ್ನು ಸಂಗ್ರಹಿಸಲಾಗುವುದು. ನಂತರ ಮುಖ್ಯಮಂತ್ರಿ ಜೊತೆ ಅಂತಿಮ ಸಭೆ ನಡೆಸಿ ಒಂದು ನಿರ್ಧಾರಕ್ಕೆ ಬರಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಈ ಮಧ್ಯೆ ಏನಾದರೂ ಹೆಚ್ಚುವರಿ ಮಾಹಿತಿ ಬೇಕಾದರೆ ನಿಮ್ಮಿಂದ ಪಡೆದುಕೊಳ್ಳಲಾಗುವುದು. ಅಲ್ಲಿಯ ತನಕ ಪ್ರತಿಭಟನೆಯನ್ನು ಕೈಬಿಡಿ’ ಎಂದು ಮನವಿ ಮಾಡಿದರು.</p>.<p>ಮೊಗೇರ ಸಮುದಾಯದ ಪರವಾಗಿ ನಾಗರಾಜ ಇ.ಎಚ್, ಎಫ್.ಕೆ.ಮೊಗೇರ ಮಾತನಾಡಿದರು. ಭಟ್ಕಳ ಉಪವಿಭಾಗಾಧಿಕಾರಿ ಮಮತಾ ದೇವಿ, ತಹಶೀಲ್ದಾರ್ ಬಿ.ಸುಮಂತ್, ಡಿ.ವೈ.ಎಸ್ಪಿ ಕೆ.ಯು.ಬೆಳ್ಳಿಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ: </strong>‘ಮೊಗೇರ ಸಮುದಾಯದರ ಪ್ರತಿಭಟನೆಯ ಕೂಗು ಸರ್ಕಾರಕ್ಕೆ ಮುಟ್ಟಿದೆ. ಸರ್ಕಾರ ಕೂಡ ಈ ಬಗ್ಗೆ ಶೀಘ್ರ ಸಭೆ ನಡೆಸಿ ಸಮಸ್ಯೆ ಇತ್ಯರ್ಥ ಮಾಡುವ ಪ್ರಯತ್ನದಲ್ಲಿದೆ’ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.</p>.<p>ಪರಿಶಿಷ್ಟ ಜಾತಿ ಸೌಲಭ್ಯಕ್ಕಾಗಿ ಪಟ್ಟಣದಲ್ಲಿ ಮೊಗೇರ ಸಮುದಾಯವರು ನಡೆಸುತ್ತಿರುವ ಪ್ರತಿಭಟನೆಯ ಸ್ಥಳಕ್ಕೆ ಮಂಗಳವಾರ ಅವರು ಭೇಟಿ ನೀಡಿ ಮಾತನಾಡಿದರು.</p>.<p>‘ಮೊಗೇರ ಸಮುದಾಯ ಎಸ್.ಸಿ ಸೌಲಭ್ಯ ವಂಚಿತರಾದ ಬಗ್ಗೆ ಹಾಗೂ ವಿವಿಧ ಸ್ಥರಗಳ ತಮ್ಮ ಹಕ್ಕಿಗಾಗಿ ಹೋರಾಟ ನಡೆಸಿದ ಬಗ್ಗೆ ನಮಗೆ ಅರಿವಿದೆ. ಈ ಬಗ್ಗೆ ಮುಖ್ತಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡಿದಾಗ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಜೊತೆ ಮಾತನಾಡಿದ್ದೇನೆ’ ಎಂದರು.</p>.<p>‘ಏ.23ರಂದು ಕಾನೂನು ತಜ್ಞರನ್ನೊಳಗೊಂಡ ಒಂದು ಸಮಿತಿಯು ಸಭೆ ನಡೆಸಲಿದೆ. ಮೊಗೇರರಿಗೆ ಎಸ್.ಸಿ ಸೌಲಭ್ಯ ನೀಡುವ ಸಾಧ್ಯತೆ ಬಗ್ಗೆ ಚರ್ಚಿಸಿ, ಅಗತ್ಯ ದಾಖಲೆಗಳನ್ನು ಸಂಗ್ರಹಿಸಲಾಗುವುದು. ನಂತರ ಮುಖ್ಯಮಂತ್ರಿ ಜೊತೆ ಅಂತಿಮ ಸಭೆ ನಡೆಸಿ ಒಂದು ನಿರ್ಧಾರಕ್ಕೆ ಬರಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಈ ಮಧ್ಯೆ ಏನಾದರೂ ಹೆಚ್ಚುವರಿ ಮಾಹಿತಿ ಬೇಕಾದರೆ ನಿಮ್ಮಿಂದ ಪಡೆದುಕೊಳ್ಳಲಾಗುವುದು. ಅಲ್ಲಿಯ ತನಕ ಪ್ರತಿಭಟನೆಯನ್ನು ಕೈಬಿಡಿ’ ಎಂದು ಮನವಿ ಮಾಡಿದರು.</p>.<p>ಮೊಗೇರ ಸಮುದಾಯದ ಪರವಾಗಿ ನಾಗರಾಜ ಇ.ಎಚ್, ಎಫ್.ಕೆ.ಮೊಗೇರ ಮಾತನಾಡಿದರು. ಭಟ್ಕಳ ಉಪವಿಭಾಗಾಧಿಕಾರಿ ಮಮತಾ ದೇವಿ, ತಹಶೀಲ್ದಾರ್ ಬಿ.ಸುಮಂತ್, ಡಿ.ವೈ.ಎಸ್ಪಿ ಕೆ.ಯು.ಬೆಳ್ಳಿಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>