ಜನರು ದೂರು, ಅಹವಾಲು ಸಲ್ಲಿಕೆಗೆ ಅನುಕೂಲವಾಗುವಂತೆ ಜಿಲ್ಲಾಕೇಂದ್ರದಲ್ಲಿ ಸಂಸದರ ಅಧಿಕೃತ ಕಚೇರಿ ತೆರೆಯಲಾಗುತ್ತದೆ. ಉತ್ತರ ಕನ್ನಡ ಸಂಸದರ ಕಚೇರಿ ಕಳೆದ ಹಲವು ತಿಂಗಳುಗಳಿಂದ ಜನರ ಪಾಲಿಗೆ ಇದ್ದೂ ಇಲ್ಲದಂತಾಗಿತ್ತು ಎಂಬ ಆರೋಪಗಳಿದ್ದವು. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರ ಕಚೇರಿಯ ಬಾಗಿಲು ಸದಾಕಾಲ ಮುಚ್ಚಿರುವುದು ಆರೋಪಗಳಿಗೆ ಪುಷ್ಟಿ ನೀಡಿದ್ದವು.