<p><strong>ಮುಂಡಗೋಡ</strong>: ತಾಲ್ಲೂಕಿನ ಪಾಳಾ ಸನಿಹದ ರಾಮಾಪುರ ಕ್ರಾಸ್ನಲ್ಲಿ ಬುಧವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ, ಪಟ್ಟಣದ ಮೂವರು ಯುವಕರು ಮೃತಪಟ್ಟಿದ್ದಾರೆ.</p>.<p>ಕಾರಿನಲ್ಲಿ ಒಟ್ಟು ಐದು ಮಂದಿ ಪಾಳಾ ಜಾತ್ರೆಗೆ ಹೊರಟಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.</p>.<p>ಪಟ್ಟಣದ ಬಸವನಬೀದಿಯ ನಿವಾಸಿಗಳಾದ ಗಣೇಶ ಶಿವಾನಂದ ಗಾಣಿಗೇರ (27), ವಿರೇಶ ಶಿವಾನಂದ ಗಾಣಿಗೇರ(26) ಹಾಗೂ ಹುಬ್ಬಳ್ಳಿ ರಸ್ತೆಯ ನಿವಾಸಿ ಶಂಕರಯ್ಯ ಮಲ್ಲಯ್ಯ ಹಿರೇಮಠ(25) ಮೃತಪಟ್ಟವರು. ಕಾರಿನಲ್ಲಿದ್ದ ಗೌತಮ ಹದಳಗಿ ಹಾಗೂ ಪ್ರವೀಣ ಭಟ್ಕಳ ಗಾಯಗೊಂಡಿದ್ದು, ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. </p>.<p>ಗಣೇಶ, ವಿರೇಶ ಸಹೋದರರಿಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಯುವಕ ಶಂಕ್ರಯ್ಯ ಹುಬ್ಬಳ್ಳಿ ಕಿಮ್ಸ್ನಲ್ಲಿ ಗುರುವಾರ ಮೃತಪಟ್ಟಿದ್ದಾರೆ. ಮೂವರ ಅಂತ್ಯಕ್ರಿಯೆ ಗುರುವಾರ ನಡೆಯಿತು. ಮೃತ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಈ ಕುರಿತು ಪ್ರಕರಣದಾಖಲಾಗಿದೆ.</p>.<p><a href="https://www.prajavani.net/district/chitradurga/nothing-stands-in-the-way-of-womens-achievement-collector-1022025.html" itemprop="url">ಗರ್ಭಿಣಿಯಾಗಿದ್ದರೂ UPSC ಪರೀಕ್ಷೆ ಎದುರಿಸಿದೆ: ಜಿಲ್ಲಾಧಿಕಾರಿ ದಿವ್ಯ ಪ್ರಭು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡಗೋಡ</strong>: ತಾಲ್ಲೂಕಿನ ಪಾಳಾ ಸನಿಹದ ರಾಮಾಪುರ ಕ್ರಾಸ್ನಲ್ಲಿ ಬುಧವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ, ಪಟ್ಟಣದ ಮೂವರು ಯುವಕರು ಮೃತಪಟ್ಟಿದ್ದಾರೆ.</p>.<p>ಕಾರಿನಲ್ಲಿ ಒಟ್ಟು ಐದು ಮಂದಿ ಪಾಳಾ ಜಾತ್ರೆಗೆ ಹೊರಟಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.</p>.<p>ಪಟ್ಟಣದ ಬಸವನಬೀದಿಯ ನಿವಾಸಿಗಳಾದ ಗಣೇಶ ಶಿವಾನಂದ ಗಾಣಿಗೇರ (27), ವಿರೇಶ ಶಿವಾನಂದ ಗಾಣಿಗೇರ(26) ಹಾಗೂ ಹುಬ್ಬಳ್ಳಿ ರಸ್ತೆಯ ನಿವಾಸಿ ಶಂಕರಯ್ಯ ಮಲ್ಲಯ್ಯ ಹಿರೇಮಠ(25) ಮೃತಪಟ್ಟವರು. ಕಾರಿನಲ್ಲಿದ್ದ ಗೌತಮ ಹದಳಗಿ ಹಾಗೂ ಪ್ರವೀಣ ಭಟ್ಕಳ ಗಾಯಗೊಂಡಿದ್ದು, ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. </p>.<p>ಗಣೇಶ, ವಿರೇಶ ಸಹೋದರರಿಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಯುವಕ ಶಂಕ್ರಯ್ಯ ಹುಬ್ಬಳ್ಳಿ ಕಿಮ್ಸ್ನಲ್ಲಿ ಗುರುವಾರ ಮೃತಪಟ್ಟಿದ್ದಾರೆ. ಮೂವರ ಅಂತ್ಯಕ್ರಿಯೆ ಗುರುವಾರ ನಡೆಯಿತು. ಮೃತ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಈ ಕುರಿತು ಪ್ರಕರಣದಾಖಲಾಗಿದೆ.</p>.<p><a href="https://www.prajavani.net/district/chitradurga/nothing-stands-in-the-way-of-womens-achievement-collector-1022025.html" itemprop="url">ಗರ್ಭಿಣಿಯಾಗಿದ್ದರೂ UPSC ಪರೀಕ್ಷೆ ಎದುರಿಸಿದೆ: ಜಿಲ್ಲಾಧಿಕಾರಿ ದಿವ್ಯ ಪ್ರಭು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>