<p><strong>ಮುಂಡಗೋಡ</strong>: ಇಲ್ಲಿನ ಬಸ್ ನಿಲ್ದಾಣದಿಂದ ಕಲಘಟಗಿ ಮಾರ್ಗದ ಬಸ್ಗಾಗಿ ಎರಡು ಗಂಟೆ ಕಾದರೂ, ಬಸ್ ಬಾರದ ಹಿನ್ನೆಲೆಯಲ್ಲಿ, ಆಕ್ರೋಶಗೊಂಡ ಪ್ರಯಾಣಿಕರು, ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ರಾಜ್ಯ ರಸ್ತೆ ಸಾರಿಗೆಯ ಬಸ್ ತಡೆದು, ಭಾನುವಾರ ಪ್ರತಿಭಟಿಸಿದರು.</p>.<p>ಪ್ರತಿದಿನ ಸಂಜೆ ಕಲಘಟಗಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ ನಿಗದಿತ ಸಮಯ ಮೀರಿ ಒಂದು ಗಂಟೆ ಕಳೆದರೂ ಬಂದಿಲ್ಲ. ಈ ಮಾರ್ಗದಲ್ಲಿ ಹೋಗುವ ಪ್ರಯಾಣಿಕರ ಸಂಖ್ಯೆಯೂ ಎಂದಿಗಿಂತ ತುಸು ಹೆಚ್ಚಿತ್ತು. ಬದಲಿಯಾಗಿ ಸ್ಥಳೀಯ ಡಿಪೋದಿಂದ ಬಸ್ ವ್ಯವಸ್ಥೆ ಕಲ್ಪಿಸುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ. ಆದರೆ, ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಎಂದು ಆಕ್ರೋಶಗೊಂಡ ಪ್ರಯಾಣಿಕರು, ಹುಬ್ಬಳ್ಳಿಗೆ ಹೊರಟಿದ್ದ ಬಸ್ ಅನ್ನು ಏಕಾಏಕಿ ತಡೆದು, ಪ್ರತಿಭಟಿಸಿದರು.</p>.<p>ಸ್ಥಳಕ್ಕೆ ಬಂದ ಪೊಲೀಸರು, ಪ್ರಯಾಣಿಕರ ಮನವೊಲಿಸಿ, ಬಸ್ಗಳು ಸುಗಮವಾಗಿ ಸಂಚರಿಸುವಂತೆ ಕ್ರಮ ಕೈಗೊಂಡರು. ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದರಿಂದ, ಸ್ಥಳೀಯ ಡಿಪೋದಿಂದ ಬದಲಿಯಾಗಿ ಕಲಘಟಗಿ ಮಾರ್ಗಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲಾಯಿತು.</p>.<p>'‘ಹಾನಗಲ್ ಘಟಕದಿಂದ ಸಂಜೆ ಬರಬೇಕಿದ್ದ ಬಸ್ ಬಂದಿಲ್ಲ. ಇದರಿಂದ ಕಲಘಟಗಿ ಮಾರ್ಗದಲ್ಲಿ ಬಸ್ ಇಲ್ಲದಂತಾಗಿತ್ತು. ಪಾಳಿ ಮುಗಿಸಿ, ಊಟಕ್ಕೆ ಹೊರಟಿದ್ದ ಚಾಲಕ, ನಿರ್ವಾಹಕರಿಗೆ, ಕಲಘಟಗಿಗೆ ಹೋಗಿ ಬರುವಂತೆ ಸೂಚಿಸಿ, ಪರ್ಯಾಯವಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಯಿತು’ ಎಂದು ಘಟಕ ವ್ಯವಸ್ಥಾಪಕ ಎಸ್.ಎಂ.ಕುರ್ತಕೋಟಿ ಹೇಳಿದರು.</p>.<p>‘ಕಲಘಟಗಿ ಮಾರ್ಗವಾಗಿ ಪ್ರತಿದಿನ ರಾತ್ರಿ 8.30ಕ್ಕೆ ಇಲ್ಲಿನ ನಿಲ್ದಾಣದಿಂದ ಬಸ್ ಬಿಡಬೇಕು. ಈ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿರುತ್ತದೆ’ ಎಂದು ಯುವಮುಖಂಡ ಕೆಂಜೋಡಿ ಗಲಬಿ ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-20-405178498</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡಗೋಡ</strong>: ಇಲ್ಲಿನ ಬಸ್ ನಿಲ್ದಾಣದಿಂದ ಕಲಘಟಗಿ ಮಾರ್ಗದ ಬಸ್ಗಾಗಿ ಎರಡು ಗಂಟೆ ಕಾದರೂ, ಬಸ್ ಬಾರದ ಹಿನ್ನೆಲೆಯಲ್ಲಿ, ಆಕ್ರೋಶಗೊಂಡ ಪ್ರಯಾಣಿಕರು, ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ರಾಜ್ಯ ರಸ್ತೆ ಸಾರಿಗೆಯ ಬಸ್ ತಡೆದು, ಭಾನುವಾರ ಪ್ರತಿಭಟಿಸಿದರು.</p>.<p>ಪ್ರತಿದಿನ ಸಂಜೆ ಕಲಘಟಗಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ ನಿಗದಿತ ಸಮಯ ಮೀರಿ ಒಂದು ಗಂಟೆ ಕಳೆದರೂ ಬಂದಿಲ್ಲ. ಈ ಮಾರ್ಗದಲ್ಲಿ ಹೋಗುವ ಪ್ರಯಾಣಿಕರ ಸಂಖ್ಯೆಯೂ ಎಂದಿಗಿಂತ ತುಸು ಹೆಚ್ಚಿತ್ತು. ಬದಲಿಯಾಗಿ ಸ್ಥಳೀಯ ಡಿಪೋದಿಂದ ಬಸ್ ವ್ಯವಸ್ಥೆ ಕಲ್ಪಿಸುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ. ಆದರೆ, ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಎಂದು ಆಕ್ರೋಶಗೊಂಡ ಪ್ರಯಾಣಿಕರು, ಹುಬ್ಬಳ್ಳಿಗೆ ಹೊರಟಿದ್ದ ಬಸ್ ಅನ್ನು ಏಕಾಏಕಿ ತಡೆದು, ಪ್ರತಿಭಟಿಸಿದರು.</p>.<p>ಸ್ಥಳಕ್ಕೆ ಬಂದ ಪೊಲೀಸರು, ಪ್ರಯಾಣಿಕರ ಮನವೊಲಿಸಿ, ಬಸ್ಗಳು ಸುಗಮವಾಗಿ ಸಂಚರಿಸುವಂತೆ ಕ್ರಮ ಕೈಗೊಂಡರು. ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದರಿಂದ, ಸ್ಥಳೀಯ ಡಿಪೋದಿಂದ ಬದಲಿಯಾಗಿ ಕಲಘಟಗಿ ಮಾರ್ಗಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲಾಯಿತು.</p>.<p>'‘ಹಾನಗಲ್ ಘಟಕದಿಂದ ಸಂಜೆ ಬರಬೇಕಿದ್ದ ಬಸ್ ಬಂದಿಲ್ಲ. ಇದರಿಂದ ಕಲಘಟಗಿ ಮಾರ್ಗದಲ್ಲಿ ಬಸ್ ಇಲ್ಲದಂತಾಗಿತ್ತು. ಪಾಳಿ ಮುಗಿಸಿ, ಊಟಕ್ಕೆ ಹೊರಟಿದ್ದ ಚಾಲಕ, ನಿರ್ವಾಹಕರಿಗೆ, ಕಲಘಟಗಿಗೆ ಹೋಗಿ ಬರುವಂತೆ ಸೂಚಿಸಿ, ಪರ್ಯಾಯವಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಯಿತು’ ಎಂದು ಘಟಕ ವ್ಯವಸ್ಥಾಪಕ ಎಸ್.ಎಂ.ಕುರ್ತಕೋಟಿ ಹೇಳಿದರು.</p>.<p>‘ಕಲಘಟಗಿ ಮಾರ್ಗವಾಗಿ ಪ್ರತಿದಿನ ರಾತ್ರಿ 8.30ಕ್ಕೆ ಇಲ್ಲಿನ ನಿಲ್ದಾಣದಿಂದ ಬಸ್ ಬಿಡಬೇಕು. ಈ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿರುತ್ತದೆ’ ಎಂದು ಯುವಮುಖಂಡ ಕೆಂಜೋಡಿ ಗಲಬಿ ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-20-405178498</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>