<p>ಮುಂಡಗೋಡ: ‘ತಾಲ್ಲೂಕು ಮಟ್ಟದ 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಕನ್ನಡದ ರಥ ಎಳೆಯುವ ಕೆಲಸವಾಗಲಿ. ಅಕ್ಷರಜಾತ್ರೆಗೆ ಪ್ರತಿಯೊಬ್ಬರೂ ಸಹಕಾರ ನೀಡಲಿ’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಏ.23ರಂದು ಇಲ್ಲಿನ ಎಲ್ವಿಕೆ ಸಭಾಂಗಣದಲ್ಲಿ ಜರುಗುವ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸೋಮವಾರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ಸಾಹಿತ್ಯ ಸಮ್ಮೇಳನ ಯುವ ಸಾಹಿತಿಗಳಿಗೆ ಸೂಕ್ತ ವೇದಿಕೆಯಾಗಿದ್ದು, ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದು ಸೂಚಿಸಿದರು.</p>.<p>ಕನ್ನಡ ನಾಡು, ನುಡಿಯ ವಿಚಾರದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿರುವ ಕನ್ನಡಾಭಿಮಾನಿಗಳು ಹಾಗೂ ಸಾಹಿತ್ಯಾಸಕ್ತರು ಉತ್ಸಾಹದಿಂದ ಪಾಲ್ಗೊಳ್ಳಬೇಕು’ ಎಂದರು.</p>.<p>ಸಮ್ಮೇಳನ ಅಧ್ಯಕ್ಷ ಡಾ.ಪಿ.ಪಿ.ಛಬ್ಬಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ವಸಂತ ಕೊಣಸಾಲಿ, ಗೌರವ ಕಾರ್ಯದರ್ಶಿ ಎಸ್.ಡಿ. ಮುಡೆಣ್ಣವರ, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಭಾಷ್ ಡೋರಿ, ಚಿದಾನಂದ ಪಾಟೀಲ, ಸುಭಾಷ್ ವಡ್ಡರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-20-1825263263</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಡಗೋಡ: ‘ತಾಲ್ಲೂಕು ಮಟ್ಟದ 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಕನ್ನಡದ ರಥ ಎಳೆಯುವ ಕೆಲಸವಾಗಲಿ. ಅಕ್ಷರಜಾತ್ರೆಗೆ ಪ್ರತಿಯೊಬ್ಬರೂ ಸಹಕಾರ ನೀಡಲಿ’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಏ.23ರಂದು ಇಲ್ಲಿನ ಎಲ್ವಿಕೆ ಸಭಾಂಗಣದಲ್ಲಿ ಜರುಗುವ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸೋಮವಾರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ಸಾಹಿತ್ಯ ಸಮ್ಮೇಳನ ಯುವ ಸಾಹಿತಿಗಳಿಗೆ ಸೂಕ್ತ ವೇದಿಕೆಯಾಗಿದ್ದು, ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದು ಸೂಚಿಸಿದರು.</p>.<p>ಕನ್ನಡ ನಾಡು, ನುಡಿಯ ವಿಚಾರದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿರುವ ಕನ್ನಡಾಭಿಮಾನಿಗಳು ಹಾಗೂ ಸಾಹಿತ್ಯಾಸಕ್ತರು ಉತ್ಸಾಹದಿಂದ ಪಾಲ್ಗೊಳ್ಳಬೇಕು’ ಎಂದರು.</p>.<p>ಸಮ್ಮೇಳನ ಅಧ್ಯಕ್ಷ ಡಾ.ಪಿ.ಪಿ.ಛಬ್ಬಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ವಸಂತ ಕೊಣಸಾಲಿ, ಗೌರವ ಕಾರ್ಯದರ್ಶಿ ಎಸ್.ಡಿ. ಮುಡೆಣ್ಣವರ, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಭಾಷ್ ಡೋರಿ, ಚಿದಾನಂದ ಪಾಟೀಲ, ಸುಭಾಷ್ ವಡ್ಡರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-20-1825263263</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>