<p>ಮುಂಡಗೋಡ: ‘ಅಹಿಂಸೆಯೇ ಪರಮೋಧರ್ಮ ಎಂಬ ತತ್ವ ಪ್ರತಿಪಾದಿಸಿದ ಮಹಾವೀರರ ಸಂದೇಶವು ಮಾನವೀಯತೆಯ ಮಹತ್ವ ಸಾರುತ್ತದೆ. ಅವರು ನೀಡಿರುವ ಪಂಚ ತತ್ವಗಳು ಸರ್ವಕಾಲಕ್ಕೂ ಸಲ್ಲುತ್ತವೆ’ ಎಂದು ತಹಶೀಲ್ದಾರ್ ಶಂಕರ ಗೌಡಿ ಹೇಳಿದರು.</p>.<p>ತಾಲ್ಲೂಕು ಆಡಳಿತ ಹಾಗೂ ಜೈನ ಸಮುದಾಯದ ಆಶ್ರಯದಲ್ಲಿ ಪಟ್ಟಣದ ಶಿರಸಿ ರಸ್ತೆಯಲ್ಲಿನ ಜೈನ ಬಸದಿಯ ಆವರಣದಲ್ಲಿ ಸೋಮವಾರ ಜರುಗಿದ ಮಹಾವೀರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>ತಾಲ್ಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸ್ವರೂಪರಾಣಿ ಪಾಟೀಲ ಮಾತನಾಡಿ, ‘ಮಹಾಪುರುಷರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಜಯಂತಿ ಆಚರಣೆಗೆ ಅರ್ಥ ಬರುತ್ತದೆ’ ಎಂದರು.</p>.<p>ಜೈನ ಬಸದಿಯಿಂದ ಶಂಭವನಾಥ ಮತ್ತು ಮಹಾವೀರರ ಚಿತ್ರಪಟದೊಂದಿಗೆ ಪಟ್ಟಣದ ಬನ್ನಿ ಮಹಾಕಾಳಿ ದೇವಸ್ಥಾನದವರೆಗೆ ಮೆರವಣಿಗೆ ನಡೆದು, ಬಸದಿಗೆ ಮರಳಿತು.</p>.<p>ಬಿಇಒ ಸುಮಾ ಜಿ., ಜೈನ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಧರಣೇಂದ್ರ ಅಂಗಡಿ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ವಸಂತ ಕೊಣಸಾಲಿ, ಡಾ. ಪಿ.ಪಿ.ಛಬ್ಬಿ, ಉಪತಹಶೀಲ್ದಾರ್ ಜಿ.ಬಿ. ಭಟ್, ಸಂತೋಷ ಕುಮಾರ ಎಚ್., ಅರುಣಾ ಕುತ್ತೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-20-1543913372</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಡಗೋಡ: ‘ಅಹಿಂಸೆಯೇ ಪರಮೋಧರ್ಮ ಎಂಬ ತತ್ವ ಪ್ರತಿಪಾದಿಸಿದ ಮಹಾವೀರರ ಸಂದೇಶವು ಮಾನವೀಯತೆಯ ಮಹತ್ವ ಸಾರುತ್ತದೆ. ಅವರು ನೀಡಿರುವ ಪಂಚ ತತ್ವಗಳು ಸರ್ವಕಾಲಕ್ಕೂ ಸಲ್ಲುತ್ತವೆ’ ಎಂದು ತಹಶೀಲ್ದಾರ್ ಶಂಕರ ಗೌಡಿ ಹೇಳಿದರು.</p>.<p>ತಾಲ್ಲೂಕು ಆಡಳಿತ ಹಾಗೂ ಜೈನ ಸಮುದಾಯದ ಆಶ್ರಯದಲ್ಲಿ ಪಟ್ಟಣದ ಶಿರಸಿ ರಸ್ತೆಯಲ್ಲಿನ ಜೈನ ಬಸದಿಯ ಆವರಣದಲ್ಲಿ ಸೋಮವಾರ ಜರುಗಿದ ಮಹಾವೀರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>ತಾಲ್ಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸ್ವರೂಪರಾಣಿ ಪಾಟೀಲ ಮಾತನಾಡಿ, ‘ಮಹಾಪುರುಷರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಜಯಂತಿ ಆಚರಣೆಗೆ ಅರ್ಥ ಬರುತ್ತದೆ’ ಎಂದರು.</p>.<p>ಜೈನ ಬಸದಿಯಿಂದ ಶಂಭವನಾಥ ಮತ್ತು ಮಹಾವೀರರ ಚಿತ್ರಪಟದೊಂದಿಗೆ ಪಟ್ಟಣದ ಬನ್ನಿ ಮಹಾಕಾಳಿ ದೇವಸ್ಥಾನದವರೆಗೆ ಮೆರವಣಿಗೆ ನಡೆದು, ಬಸದಿಗೆ ಮರಳಿತು.</p>.<p>ಬಿಇಒ ಸುಮಾ ಜಿ., ಜೈನ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಧರಣೇಂದ್ರ ಅಂಗಡಿ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ವಸಂತ ಕೊಣಸಾಲಿ, ಡಾ. ಪಿ.ಪಿ.ಛಬ್ಬಿ, ಉಪತಹಶೀಲ್ದಾರ್ ಜಿ.ಬಿ. ಭಟ್, ಸಂತೋಷ ಕುಮಾರ ಎಚ್., ಅರುಣಾ ಕುತ್ತೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-20-1543913372</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>