‘ಹುಬ್ಬಳ್ಳಿ, ಶಿರಸಿ, ಮಂಗಳೂರು ಕಡೆ ಹೋಗುವಂತ ಬಸ್ಗಳು ರಾತ್ರಿ ಸಮಯದಲ್ಲಿ ನಿಲ್ದಾಣದ ಒಳಗೆ ಬರುವುದಿಲ್ಲ. ನಿಲ್ದಾಣದಲ್ಲಿ ಕತ್ತಲು ಇರುವುದರಿಂದ ರಸ್ತೆ ಮೇಲೆಯೇ ಬಸ್ಗಳನ್ನು ನಿಲ್ಲಿಸಿ, ಪ್ರಯಾಣಿಕರನ್ನು ಇಳಿಸಿ, ಹತ್ತಿಸಿಕೊಂಡು ಹೋಗುತ್ತಾರೆ. ಇಂತಹ ಕೆಟ್ಟ ವ್ಯವಸ್ಥೆಯಿಂದ ಮಳೆಗಾಲದಲ್ಲಿಯೂ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ. ಈಗಲೂ ಅದು ಮುಂದುವರೆದಿದೆ. ಕೋಟಿಗಟ್ಟಲೇ ಖರ್ಚು ಮಾಡಿ ಬಸ್ ನಿಲ್ದಾಣ ನಿರ್ಮಿಸಿದರೂ, ರಾತ್ರಿ ಸಮಯದಲ್ಲಿ ಪ್ರಯಾಣಿಕರಿಗೆ ಅನುಕೂಲ ಆಗುತ್ತಿಲ್ಲ’ ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತ ಪ್ರಕಾಶ ಬಡಿಗೇರ.