<p><strong>ಮುಂಡಗೋಡ</strong>: ದಶಕಗಳಿಂದ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದರೂ, ಪಟ್ಟಣ ಪಂಚಾಯಿತಿಯವರು ನಮೂನೆ-3 ನೀಡುತ್ತಿಲ್ಲ ಎಂದು ಆರೋಪಿಸಿ, ಪಟ್ಟಣದ ಇಂದಿರಾ ನಗರ, ಆನಂದ ನಗರ, ಗಣೇಶ ನಗರ, ಗಾಂಧಿನಗರ ನಿವಾಸಿಗಳು, ಇಲ್ಲಿನ ಪಟ್ಟಣ ಪಂಚಾಯಿತಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಅರಣ್ಯ ಅತಿಕ್ರಮಣ ನಿವೇಶನಗಳ ಹಕ್ಕು ಹೋರಾಟ ಸಮಿತಿ ಆಶ್ರಯದಲ್ಲಿ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಆರಂಭಿಸಿದ ನಾಲ್ಕು ವಾರ್ಡ್ಗಳ ನಿವಾಸಿಗಳು, ಕೇವಲ ಭರವಸೆ ನೀಡುವ ಅಧಿಕಾರಿಗಳು, ಕಾರ್ಯರೂಪಕ್ಕೆ ತರಲು ಮನಸ್ಸು ಮಾಡುತ್ತಿಲ್ಲ ಎಂದು ದೂರಿದರು.</p>.<p>ನಾಲ್ಕು ವಾರ್ಡ್ಗಳಲ್ಲಿ 800ಕ್ಕೂ ಹೆಚ್ಚು ಕುಟುಂಬಗಳು ದಶಕಗಳಿಂದ ವಾಸಿಸುತ್ತಿವೆ. 2017ರ ವರೆಗೂ ನಮೂನೆ-3 ವಿತರಣೆ ಮಾಡಿ, ಮನೆ ತೆರಿಗೆಯನ್ನು ತುಂಬಿಸಿಕೊಂಡಿದ್ದಾರೆ. ನಂತರದ ವರ್ಷಗಳಲ್ಲಿ ಒಬ್ಬೊಬ್ಬ ಅಧಿಕಾರಿ, ಒಂದೊಂದು ಕಾನೂನು, ನಿಯಮ ಹೇಳುತ್ತ ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿದ್ದಾರೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಅಲ್ಲಿಖಾನ ಪಠಾಣ ಆರೋಪಿಸಿದರು.</p>.<p>ವಿವಿಧ ವಸತಿ ಯೋಜನೆಯಡಿ ಹಲವರು ಮನೆಗಳನ್ನು ಈ ವಾರ್ಡ್ಗಳಲ್ಲಿ ನಿರ್ಮಿಸಿಕೊಂಡಿದ್ದಾರೆ. ಪಟ್ಟಣ ಪಂಚಾಯಿತಿ ವತಿಯಿಂದ ಮನೆ ಕರ, ನೀರಿನ ಕರ ಸಹ ತುಂಬಿಸಿಕೊಂಡಿದ್ದಾರೆ. ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ನಮೂನೆ-3 ವಿತರಣೆಗೆ ಆಗ್ರಹಿಸಿ, ಕಳೆದ ವರ್ಷ ಪ್ರತಿಭಟನೆ ನಡೆಸಿದಾಗ, ಒಂದು ತಿಂಗಳ ಕಾಲಾವಕಾಶ ಕೇಳಿದ್ದರು. ಆದರೆ, ಈಗ ಕಾನೂನಿನ ನೆಪ ಹೇಳುತ್ತ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಯುವಮುಖಂಡ ವಿಠ್ಠಲ ಬಾಳಂಬೀಡ ದೂರಿದರು.</p>.<p>ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಚಿದಾನಂದ ಹರಿಜನ, ಅಧಿಕಾರಿಗಳು ವಾಸ್ತವ ಸ್ಥಿತಿಯನ್ನು ಅರಿತು, ಜನರ ಸಮಸ್ಯೆಗೆ ಸ್ಪಂದಿಸಬೇಕು. 50-60 ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸ ಮಾಡುವರಿಗೆ ನಮೂನೆ-3 ನೀಡಬೇಕು ಎಂದು ಒತ್ತಾಯಿಸಿದರು.</p>.<p>ತಹಶೀಲ್ದಾರ್ ಶಂಕರ ಗೌಡಿ ಹಾಗೂ ಮುಖ್ಯಾಧಿಕಾರಿ ಕುಮಾರ ನಾಯ್ಕ ಪ್ರತಿಭಟನಾನಿರತರೊಂದಿಗೆ ಚರ್ಚಿಸಿದರು.</p>.<p>ಭೂಕಬಳಿಕೆ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ನಮೂನೆ-3 ವಿತರಿಸಲು ಆಗುವುದಿಲ್ಲ. ಶಾಸಕ ಶಿವರಾಮ ಹೆಬ್ಬಾರ ಅವರೊಂದಿಗೆ ಸಭೆ ಮಾಡಿ, ಒಂದು ನಿರ್ಧಾರಕ್ಕೆ ಬರಲು, ಕೆಲ ದಿನಗಳ ಸಮಯವಕಾಶ ನೀಡಬೇಕು. ಕೂಡಲೇ, ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ತಹಶೀಲ್ದಾರ್ ಹೇಳಿದರು. ಆದರೆ, ಪ್ರತಿಭಟನಾನಿರತರು ಇದಕ್ಕೆ ಒಪ್ಪಲಿಲ್ಲ.</p>.<p>ಶಾಸಕ ಹೆಬ್ಬಾರ ಭರವಸೆ: ಸಂಜೆಯ ವೇಳೆಗೆ ಶಾಸಕ ಶಿವರಾಮ ಹೆಬ್ಬಾರ ಪ್ರತಿಭಟನಾ ಸ್ಥಳಕ್ಕೆ ಬಂದು, ಸಮಸ್ಯೆಯನ್ನು ಆಲಿಸಿದರು. ಸಂಬಂಧಿಸಿದ ಅಧಿಕಾರಿಗಳೊಂದಿಗೆ ಈ ಕುರಿತು ಶೀಘ್ರವೇ ಚರ್ಚಿಸಲಾಗುವುದು. ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ, ನಿವಾಸಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ನಿವಾಸಿಗಳು ಆತಂಕಪಡುವ ಅಗತ್ಯವಿಲ್ಲ. ನಿಮ್ಮೊಂದಿಗೆ ಸದಾ ಇರುತ್ತೇನೆ ಎಂದು ಭರವಸೆ ನೀಡಿದರು. ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.</p>.<p>ಪಟ್ಟಣ ಪಂಚಾಯಿತಿ ಸದಸ್ಯ ಮಹ್ಮದಜಾಫರ ಹಂಡಿ, ಹುಲಗಪ್ಪ ಭೋವಿ, ಶಿವು ಮತ್ತಿಗಟ್ಟಿ, ನಿಸಾರ ಅಹ್ಮದ ಬ್ಯಾಕೋಡ, ರಾಜು ಭೋವಿ, ಮುಷ್ತಾಕ, ಜಾಫರ ಚೌಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡಗೋಡ</strong>: ದಶಕಗಳಿಂದ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದರೂ, ಪಟ್ಟಣ ಪಂಚಾಯಿತಿಯವರು ನಮೂನೆ-3 ನೀಡುತ್ತಿಲ್ಲ ಎಂದು ಆರೋಪಿಸಿ, ಪಟ್ಟಣದ ಇಂದಿರಾ ನಗರ, ಆನಂದ ನಗರ, ಗಣೇಶ ನಗರ, ಗಾಂಧಿನಗರ ನಿವಾಸಿಗಳು, ಇಲ್ಲಿನ ಪಟ್ಟಣ ಪಂಚಾಯಿತಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಅರಣ್ಯ ಅತಿಕ್ರಮಣ ನಿವೇಶನಗಳ ಹಕ್ಕು ಹೋರಾಟ ಸಮಿತಿ ಆಶ್ರಯದಲ್ಲಿ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಆರಂಭಿಸಿದ ನಾಲ್ಕು ವಾರ್ಡ್ಗಳ ನಿವಾಸಿಗಳು, ಕೇವಲ ಭರವಸೆ ನೀಡುವ ಅಧಿಕಾರಿಗಳು, ಕಾರ್ಯರೂಪಕ್ಕೆ ತರಲು ಮನಸ್ಸು ಮಾಡುತ್ತಿಲ್ಲ ಎಂದು ದೂರಿದರು.</p>.<p>ನಾಲ್ಕು ವಾರ್ಡ್ಗಳಲ್ಲಿ 800ಕ್ಕೂ ಹೆಚ್ಚು ಕುಟುಂಬಗಳು ದಶಕಗಳಿಂದ ವಾಸಿಸುತ್ತಿವೆ. 2017ರ ವರೆಗೂ ನಮೂನೆ-3 ವಿತರಣೆ ಮಾಡಿ, ಮನೆ ತೆರಿಗೆಯನ್ನು ತುಂಬಿಸಿಕೊಂಡಿದ್ದಾರೆ. ನಂತರದ ವರ್ಷಗಳಲ್ಲಿ ಒಬ್ಬೊಬ್ಬ ಅಧಿಕಾರಿ, ಒಂದೊಂದು ಕಾನೂನು, ನಿಯಮ ಹೇಳುತ್ತ ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿದ್ದಾರೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಅಲ್ಲಿಖಾನ ಪಠಾಣ ಆರೋಪಿಸಿದರು.</p>.<p>ವಿವಿಧ ವಸತಿ ಯೋಜನೆಯಡಿ ಹಲವರು ಮನೆಗಳನ್ನು ಈ ವಾರ್ಡ್ಗಳಲ್ಲಿ ನಿರ್ಮಿಸಿಕೊಂಡಿದ್ದಾರೆ. ಪಟ್ಟಣ ಪಂಚಾಯಿತಿ ವತಿಯಿಂದ ಮನೆ ಕರ, ನೀರಿನ ಕರ ಸಹ ತುಂಬಿಸಿಕೊಂಡಿದ್ದಾರೆ. ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ನಮೂನೆ-3 ವಿತರಣೆಗೆ ಆಗ್ರಹಿಸಿ, ಕಳೆದ ವರ್ಷ ಪ್ರತಿಭಟನೆ ನಡೆಸಿದಾಗ, ಒಂದು ತಿಂಗಳ ಕಾಲಾವಕಾಶ ಕೇಳಿದ್ದರು. ಆದರೆ, ಈಗ ಕಾನೂನಿನ ನೆಪ ಹೇಳುತ್ತ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಯುವಮುಖಂಡ ವಿಠ್ಠಲ ಬಾಳಂಬೀಡ ದೂರಿದರು.</p>.<p>ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಚಿದಾನಂದ ಹರಿಜನ, ಅಧಿಕಾರಿಗಳು ವಾಸ್ತವ ಸ್ಥಿತಿಯನ್ನು ಅರಿತು, ಜನರ ಸಮಸ್ಯೆಗೆ ಸ್ಪಂದಿಸಬೇಕು. 50-60 ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸ ಮಾಡುವರಿಗೆ ನಮೂನೆ-3 ನೀಡಬೇಕು ಎಂದು ಒತ್ತಾಯಿಸಿದರು.</p>.<p>ತಹಶೀಲ್ದಾರ್ ಶಂಕರ ಗೌಡಿ ಹಾಗೂ ಮುಖ್ಯಾಧಿಕಾರಿ ಕುಮಾರ ನಾಯ್ಕ ಪ್ರತಿಭಟನಾನಿರತರೊಂದಿಗೆ ಚರ್ಚಿಸಿದರು.</p>.<p>ಭೂಕಬಳಿಕೆ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ನಮೂನೆ-3 ವಿತರಿಸಲು ಆಗುವುದಿಲ್ಲ. ಶಾಸಕ ಶಿವರಾಮ ಹೆಬ್ಬಾರ ಅವರೊಂದಿಗೆ ಸಭೆ ಮಾಡಿ, ಒಂದು ನಿರ್ಧಾರಕ್ಕೆ ಬರಲು, ಕೆಲ ದಿನಗಳ ಸಮಯವಕಾಶ ನೀಡಬೇಕು. ಕೂಡಲೇ, ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ತಹಶೀಲ್ದಾರ್ ಹೇಳಿದರು. ಆದರೆ, ಪ್ರತಿಭಟನಾನಿರತರು ಇದಕ್ಕೆ ಒಪ್ಪಲಿಲ್ಲ.</p>.<p>ಶಾಸಕ ಹೆಬ್ಬಾರ ಭರವಸೆ: ಸಂಜೆಯ ವೇಳೆಗೆ ಶಾಸಕ ಶಿವರಾಮ ಹೆಬ್ಬಾರ ಪ್ರತಿಭಟನಾ ಸ್ಥಳಕ್ಕೆ ಬಂದು, ಸಮಸ್ಯೆಯನ್ನು ಆಲಿಸಿದರು. ಸಂಬಂಧಿಸಿದ ಅಧಿಕಾರಿಗಳೊಂದಿಗೆ ಈ ಕುರಿತು ಶೀಘ್ರವೇ ಚರ್ಚಿಸಲಾಗುವುದು. ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ, ನಿವಾಸಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ನಿವಾಸಿಗಳು ಆತಂಕಪಡುವ ಅಗತ್ಯವಿಲ್ಲ. ನಿಮ್ಮೊಂದಿಗೆ ಸದಾ ಇರುತ್ತೇನೆ ಎಂದು ಭರವಸೆ ನೀಡಿದರು. ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.</p>.<p>ಪಟ್ಟಣ ಪಂಚಾಯಿತಿ ಸದಸ್ಯ ಮಹ್ಮದಜಾಫರ ಹಂಡಿ, ಹುಲಗಪ್ಪ ಭೋವಿ, ಶಿವು ಮತ್ತಿಗಟ್ಟಿ, ನಿಸಾರ ಅಹ್ಮದ ಬ್ಯಾಕೋಡ, ರಾಜು ಭೋವಿ, ಮುಷ್ತಾಕ, ಜಾಫರ ಚೌಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>