<p>ಮುಂಡಗೋಡ: ಇಲ್ಲಿನ ಬಸ್ ನಿಲ್ದಾಣದಿಂದ ಯಲ್ಲಾಪುರ ಮಾರ್ಗದಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ ಸರಿಯಾದ ಸಮಯಕ್ಕೆ ಬಿಡದಿರುವುದರಿಂದ, ಆಕ್ರೋಶಗೊಂಡ ಪ್ರಯಾಣಿಕರು, ಸಾರಿಗೆ ಸಿಬ್ಬಂದಿಯನ್ನು ಬುಧವಾರ ತರಾಟೆಗೆ ತೆಗೆದುಕೊಂಡರು.</p>.<p>ಮಧ್ಯಾಹ್ನ 3ಗಂಟೆಗೆ ಇಲ್ಲಿನ ನಿಲ್ದಾಣದಿಂದ ಹೊರಡಬೇಕಿದ್ದ ಬಸ್, ಸಂಜೆಯಾದರೂ ನಿಲ್ದಾಣಕ್ಕೆ ಬಂದಿಲ್ಲ. ಗಂಟೆಗಟ್ಟಲೇ ಕಾದರೂ, ಸಾರಿಗೆ ಸಿಬ್ಬಂದಿ ಬದಲಿ ವ್ಯವಸ್ಥೆ ಮಾಡಿಲ್ಲ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು, ಬಸ್ ನಿಲ್ದಾಣದಲ್ಲಿ ಪ್ರತಿಭಟನೆಗೆ ಮುಂದಾದರು.</p>.<p>ಪಟ್ಟಣದಿಂದ ಯಲ್ಲಾಪುರಕ್ಕೆ ಹೋಗುವ ಮಾರ್ಗದಲ್ಲಿ ತಾಲ್ಲೂಕಿನ ಹಲವು ಹಳ್ಳಿಗಳು ಬರುತ್ತವೆ. ನಿತ್ಯವೂ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುತ್ತಾರೆ. ಆದರೆ, ಸರಿಯಾದ ಸಮಯಕ್ಕೆ ಬಸ್ ಸಂಚಾರ ಇಲ್ಲದೇ, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರಯಾಣಿಕ ರವಿ ಪಾಟೀಲ ದೂರಿದರು.</p>.<p>‘ಳಿಗ್ಗೆಯೂ ಯಲ್ಲಾಪುರದಿಂದ ಮುಂಡಗೋಡಕ್ಕೆ ಬರುವ ಬಸ್, ಎರಡು ಗಂಟೆ ತಡವಾಗಿ ಬಿಟ್ಟಿದೆ. ಕೆಲವರು, ಬಸ್ ಬಾರದಿದ್ದಾಗ ಖಾಸಗಿ ವಾಹನದಲ್ಲಿ ಮುಂಡಗೋಡಕ್ಕೆ ಬಂದಿದ್ದಾರೆ. ಈ ಮಾರ್ಗದಲ್ಲಿ ಈಚೆಗಿನ ದಿನಗಳಲ್ಲಿ ನಿಗದಿತ ಸಮಯ ಮೀರಿ, ಸಾರಿಗೆ ಬಸ್ಗಳು ಸಂಚರಿಸುತ್ತಿವೆ. ಕೆಲವು ಮಾರ್ಗ ಮಧ್ಯೆ ಕೆಟ್ಟು ನಿಲ್ಲುವಂತ ದೃಶ್ಯ ಸಾಮಾನ್ಯವಾಗಿದೆ. ಸಾರಿಗೆ ಸಿಬ್ಬಂದಿಗೆ ಪ್ರಯಾಣಿಕರ ಕಷ್ಟ ಅರ್ಥವಾಗುತ್ತಿಲ್ಲ. ಬಸ್ ಬರುತ್ತದೆ ಎನ್ನುತ್ತಲೇ ಸಮಯ ದೂಡುತ್ತಿದ್ದಾರೆ’ಎಂದು ಪ್ರಯಾಣಿಕರಾದ ಝೀನತ್, ಸವಿತಾಬಾಯಿ ಹೇಳಿದರು.</p>.<p>‘ತಾಲ್ಲೂಕಿನಲ್ಲಿ ಬಸ್ ಘಟಕವಿದ್ದರೂ, ಸಾರಿಗೆ ಸಮಸ್ಯೆ ಮುಂದುವರಿದಿದೆ. ಸ್ಥಳೀಯ ಘಟಕದಿಂದ ಹೊಸ ಬಸ್ಗಳನ್ನು ಬಿಡುವ ವ್ಯವಸ್ಥೆಯಾಗಬೇಕು. ಹಳೆಯ ಬಸ್ಗಳನ್ನೇ ಹೆಚ್ಚಿನ ಸಂಖ್ಯೆಯಲ್ಲಿ ಓಡಿಸುತ್ತಿರುವುದರಿಂದ, ಎಲ್ಲೆಂದರಲ್ಲಿ ಹಾಳಾಗಿ ನಿಲ್ಲುತ್ತವೆ. ಇದರಿಂದ, ನಿಗದಿತ ಸಮಯ ಮೀರಿ, ಬಸ್ಗಳು ಸಂಚರಿಸುವಂತ ಪರಿಸ್ಥಿತಿಯಿದೆ. ಸಾರಿಗೆ ಅಧಿಕಾರಿಗಳು ಈ ಕುರಿತು ಗಮನಹರಿಸಬೇಕು’ ಎಂದು ಮುಂಡಗೋಡ ನಾಗರಿಕ ವೇದಿಕೆ ಅಧ್ಯಕ್ಷ ಗುಡ್ಡಪ್ಪ ಕಾತೂರ ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-20-2066170984</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಡಗೋಡ: ಇಲ್ಲಿನ ಬಸ್ ನಿಲ್ದಾಣದಿಂದ ಯಲ್ಲಾಪುರ ಮಾರ್ಗದಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ ಸರಿಯಾದ ಸಮಯಕ್ಕೆ ಬಿಡದಿರುವುದರಿಂದ, ಆಕ್ರೋಶಗೊಂಡ ಪ್ರಯಾಣಿಕರು, ಸಾರಿಗೆ ಸಿಬ್ಬಂದಿಯನ್ನು ಬುಧವಾರ ತರಾಟೆಗೆ ತೆಗೆದುಕೊಂಡರು.</p>.<p>ಮಧ್ಯಾಹ್ನ 3ಗಂಟೆಗೆ ಇಲ್ಲಿನ ನಿಲ್ದಾಣದಿಂದ ಹೊರಡಬೇಕಿದ್ದ ಬಸ್, ಸಂಜೆಯಾದರೂ ನಿಲ್ದಾಣಕ್ಕೆ ಬಂದಿಲ್ಲ. ಗಂಟೆಗಟ್ಟಲೇ ಕಾದರೂ, ಸಾರಿಗೆ ಸಿಬ್ಬಂದಿ ಬದಲಿ ವ್ಯವಸ್ಥೆ ಮಾಡಿಲ್ಲ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು, ಬಸ್ ನಿಲ್ದಾಣದಲ್ಲಿ ಪ್ರತಿಭಟನೆಗೆ ಮುಂದಾದರು.</p>.<p>ಪಟ್ಟಣದಿಂದ ಯಲ್ಲಾಪುರಕ್ಕೆ ಹೋಗುವ ಮಾರ್ಗದಲ್ಲಿ ತಾಲ್ಲೂಕಿನ ಹಲವು ಹಳ್ಳಿಗಳು ಬರುತ್ತವೆ. ನಿತ್ಯವೂ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುತ್ತಾರೆ. ಆದರೆ, ಸರಿಯಾದ ಸಮಯಕ್ಕೆ ಬಸ್ ಸಂಚಾರ ಇಲ್ಲದೇ, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರಯಾಣಿಕ ರವಿ ಪಾಟೀಲ ದೂರಿದರು.</p>.<p>‘ಳಿಗ್ಗೆಯೂ ಯಲ್ಲಾಪುರದಿಂದ ಮುಂಡಗೋಡಕ್ಕೆ ಬರುವ ಬಸ್, ಎರಡು ಗಂಟೆ ತಡವಾಗಿ ಬಿಟ್ಟಿದೆ. ಕೆಲವರು, ಬಸ್ ಬಾರದಿದ್ದಾಗ ಖಾಸಗಿ ವಾಹನದಲ್ಲಿ ಮುಂಡಗೋಡಕ್ಕೆ ಬಂದಿದ್ದಾರೆ. ಈ ಮಾರ್ಗದಲ್ಲಿ ಈಚೆಗಿನ ದಿನಗಳಲ್ಲಿ ನಿಗದಿತ ಸಮಯ ಮೀರಿ, ಸಾರಿಗೆ ಬಸ್ಗಳು ಸಂಚರಿಸುತ್ತಿವೆ. ಕೆಲವು ಮಾರ್ಗ ಮಧ್ಯೆ ಕೆಟ್ಟು ನಿಲ್ಲುವಂತ ದೃಶ್ಯ ಸಾಮಾನ್ಯವಾಗಿದೆ. ಸಾರಿಗೆ ಸಿಬ್ಬಂದಿಗೆ ಪ್ರಯಾಣಿಕರ ಕಷ್ಟ ಅರ್ಥವಾಗುತ್ತಿಲ್ಲ. ಬಸ್ ಬರುತ್ತದೆ ಎನ್ನುತ್ತಲೇ ಸಮಯ ದೂಡುತ್ತಿದ್ದಾರೆ’ಎಂದು ಪ್ರಯಾಣಿಕರಾದ ಝೀನತ್, ಸವಿತಾಬಾಯಿ ಹೇಳಿದರು.</p>.<p>‘ತಾಲ್ಲೂಕಿನಲ್ಲಿ ಬಸ್ ಘಟಕವಿದ್ದರೂ, ಸಾರಿಗೆ ಸಮಸ್ಯೆ ಮುಂದುವರಿದಿದೆ. ಸ್ಥಳೀಯ ಘಟಕದಿಂದ ಹೊಸ ಬಸ್ಗಳನ್ನು ಬಿಡುವ ವ್ಯವಸ್ಥೆಯಾಗಬೇಕು. ಹಳೆಯ ಬಸ್ಗಳನ್ನೇ ಹೆಚ್ಚಿನ ಸಂಖ್ಯೆಯಲ್ಲಿ ಓಡಿಸುತ್ತಿರುವುದರಿಂದ, ಎಲ್ಲೆಂದರಲ್ಲಿ ಹಾಳಾಗಿ ನಿಲ್ಲುತ್ತವೆ. ಇದರಿಂದ, ನಿಗದಿತ ಸಮಯ ಮೀರಿ, ಬಸ್ಗಳು ಸಂಚರಿಸುವಂತ ಪರಿಸ್ಥಿತಿಯಿದೆ. ಸಾರಿಗೆ ಅಧಿಕಾರಿಗಳು ಈ ಕುರಿತು ಗಮನಹರಿಸಬೇಕು’ ಎಂದು ಮುಂಡಗೋಡ ನಾಗರಿಕ ವೇದಿಕೆ ಅಧ್ಯಕ್ಷ ಗುಡ್ಡಪ್ಪ ಕಾತೂರ ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-20-2066170984</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>