<p><strong>ಮುಂಡಗೋಡ</strong>: ಪಟ್ಟಣದ ನೂರಾನಿಗಲ್ಲಿ ನಿವಾಸಿ ಜಮೀರ್ ಅಹ್ಮದ್ ದರ್ಗಾವಾಲೆ (ಎನ್.ಎಂ.ಡಿ) (38) ಎಂಬಾತನನ್ನು ಇಲ್ಲಿನ ಬಸ್ ನಿಲ್ದಾಣದ ಎದುರಿನ ಹೋಟೆಲ್ವೊಂದರಲ್ಲಿ ಶುಕ್ರವಾರ ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. </p><p>ರಾತ್ರಿ 11ಗಂಟೆಯ ಸುಮಾರಿಗೆ ಸ್ನೇಹಿತನೊಂದಿಗೆ ಹೋಟೆಲ್ಗೆ ಬಂದಿದ್ದ ಎನ್ಎಂಡಿ ಮೇಲೆ 3-4ಜನರ ತಂಡವೊಂದು ಏಕಾಏಕಿ ಹೋಟೆಲ್ಗೆ ನುಗ್ಗಿ, ಖಾರದಪುಡಿ ಎರಚಿ, ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಮೃತ ಜಮೀರ ಪ್ರಯತ್ನಿಸಿದ್ದಾರೆ. ಆದರೆ, ಹೋಟೆಲ್ ನ ಅಡುಗೆ ಕೋಣೆಯಲ್ಲಿ ರಕ್ತದ ಮಡುವಿನಲ್ಲಿ ಉಸಿರು ಚೆಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಒಂದೂವರೆ ವರ್ಷದ ಹಿಂದೆ ಮೃತ ಜಮೀರ ಅಹ್ಮದ ದರ್ಗಾವಾಲೆಯನ್ನು ಪಟ್ಟಣದ ಶಾಸಕರ ಮಾದರಿ ಶಾಲೆಯ ಎದುರುಗಡೆ, ಕೆಲವರು ಕಾರಿನಲ್ಲಿ ಬಂದು ಅಪಹರಣ ಮಾಡಿದ್ದರು. ನಂತರ, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಅಪಹರಣಕಾರರನ್ನು ಬಂಧಿಸಿ, ಜಮೀರ ಅಹ್ಮದ ದರ್ಗಾವಾಲೆಯನ್ನು ರಕ್ಷಿಸಿದ್ದರು. </p><p>ಕೊಲೆಯಾದ ಸುದ್ದಿ ಹರಡುತ್ತಿದ್ದಂತೆ, ಮಧ್ಯರಾತ್ರಿಯೇ ನೂರಾರು ಸಂಖ್ಯೆಯಲ್ಲಿ ಇಲ್ಲಿನ ಬಸ್ ನಿಲ್ದಾಣದ ಎದುರು ಜನರು ಜಮಾವಣೆಗೊಂಡಿದ್ದರು. ಮೃತದೇಹವನ್ನು ಹೋಟೆಲ್ನಿಂದ ತಾಲ್ಲೂಕು ಆಸ್ಪತ್ರೆಗೆ ಸಾಗಿಸುವಾಗ, ಜನಜಂಗುಳಿ ಹೆಚ್ಚಾಗಿದ್ದರಿಂದ, ಜನರನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟರು. </p><p>ರಾತ್ರಿಯೇ ಘಟನಾ ಸ್ಥಳಕ್ಕೆ ಶಿರಸಿ ಡಿಎಸ್ಪಿ ಗೀತಾ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.</p><p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಶನಿವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾರವಾರ ಕ್ರಿಮ್ಸ್ಗೆ ರವಾನಿಸಲಾಗಿದೆ. </p><p>'ಕೊಲೆ ಪ್ರಕರಣ ಬೇಧಿಸಲು ಮೂರು ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಕೊಲೆಗೆ ನಿಖರ ಕಾರಣ ತನಿಖೆಯಿಂದ ಗೊತ್ತಾಗಬೇಕಿದೆ. ಮೃತ ಜಮೀರ ಅಹ್ಮದ ದರ್ಗಾವಾಲೆ ಮೇಲೆ ಬೆಟ್ಟಿಂಗ್ ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣಗಳಿವೆ' ಎಂದು ಎಸ್.ಪಿ ದೀಪನ್ ಎಂ.ಎನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡಗೋಡ</strong>: ಪಟ್ಟಣದ ನೂರಾನಿಗಲ್ಲಿ ನಿವಾಸಿ ಜಮೀರ್ ಅಹ್ಮದ್ ದರ್ಗಾವಾಲೆ (ಎನ್.ಎಂ.ಡಿ) (38) ಎಂಬಾತನನ್ನು ಇಲ್ಲಿನ ಬಸ್ ನಿಲ್ದಾಣದ ಎದುರಿನ ಹೋಟೆಲ್ವೊಂದರಲ್ಲಿ ಶುಕ್ರವಾರ ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. </p><p>ರಾತ್ರಿ 11ಗಂಟೆಯ ಸುಮಾರಿಗೆ ಸ್ನೇಹಿತನೊಂದಿಗೆ ಹೋಟೆಲ್ಗೆ ಬಂದಿದ್ದ ಎನ್ಎಂಡಿ ಮೇಲೆ 3-4ಜನರ ತಂಡವೊಂದು ಏಕಾಏಕಿ ಹೋಟೆಲ್ಗೆ ನುಗ್ಗಿ, ಖಾರದಪುಡಿ ಎರಚಿ, ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಮೃತ ಜಮೀರ ಪ್ರಯತ್ನಿಸಿದ್ದಾರೆ. ಆದರೆ, ಹೋಟೆಲ್ ನ ಅಡುಗೆ ಕೋಣೆಯಲ್ಲಿ ರಕ್ತದ ಮಡುವಿನಲ್ಲಿ ಉಸಿರು ಚೆಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಒಂದೂವರೆ ವರ್ಷದ ಹಿಂದೆ ಮೃತ ಜಮೀರ ಅಹ್ಮದ ದರ್ಗಾವಾಲೆಯನ್ನು ಪಟ್ಟಣದ ಶಾಸಕರ ಮಾದರಿ ಶಾಲೆಯ ಎದುರುಗಡೆ, ಕೆಲವರು ಕಾರಿನಲ್ಲಿ ಬಂದು ಅಪಹರಣ ಮಾಡಿದ್ದರು. ನಂತರ, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಅಪಹರಣಕಾರರನ್ನು ಬಂಧಿಸಿ, ಜಮೀರ ಅಹ್ಮದ ದರ್ಗಾವಾಲೆಯನ್ನು ರಕ್ಷಿಸಿದ್ದರು. </p><p>ಕೊಲೆಯಾದ ಸುದ್ದಿ ಹರಡುತ್ತಿದ್ದಂತೆ, ಮಧ್ಯರಾತ್ರಿಯೇ ನೂರಾರು ಸಂಖ್ಯೆಯಲ್ಲಿ ಇಲ್ಲಿನ ಬಸ್ ನಿಲ್ದಾಣದ ಎದುರು ಜನರು ಜಮಾವಣೆಗೊಂಡಿದ್ದರು. ಮೃತದೇಹವನ್ನು ಹೋಟೆಲ್ನಿಂದ ತಾಲ್ಲೂಕು ಆಸ್ಪತ್ರೆಗೆ ಸಾಗಿಸುವಾಗ, ಜನಜಂಗುಳಿ ಹೆಚ್ಚಾಗಿದ್ದರಿಂದ, ಜನರನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟರು. </p><p>ರಾತ್ರಿಯೇ ಘಟನಾ ಸ್ಥಳಕ್ಕೆ ಶಿರಸಿ ಡಿಎಸ್ಪಿ ಗೀತಾ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.</p><p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಶನಿವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾರವಾರ ಕ್ರಿಮ್ಸ್ಗೆ ರವಾನಿಸಲಾಗಿದೆ. </p><p>'ಕೊಲೆ ಪ್ರಕರಣ ಬೇಧಿಸಲು ಮೂರು ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಕೊಲೆಗೆ ನಿಖರ ಕಾರಣ ತನಿಖೆಯಿಂದ ಗೊತ್ತಾಗಬೇಕಿದೆ. ಮೃತ ಜಮೀರ ಅಹ್ಮದ ದರ್ಗಾವಾಲೆ ಮೇಲೆ ಬೆಟ್ಟಿಂಗ್ ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣಗಳಿವೆ' ಎಂದು ಎಸ್.ಪಿ ದೀಪನ್ ಎಂ.ಎನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>