<p><strong>ಭಟ್ಕಳ</strong>: ‘ಮುರುಡೇಶ್ವರದ ಶಿವ ದೇವಸ್ಥಾನದ ದರ್ಶನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ನಿಯಮ ಪಾಲಿಸಬೇಕು’ ಎಂದು ದೇವಸ್ಥಾನದ ವತಿಯಿಂದ ಭಾನುವಾರ ಸೂಚನೆ ಹೊರಡಿಸಲಾಗಿದೆ. </p>.<p>ಈ ಕುರಿತು, ಭಕ್ತರು ವಸ್ತ್ರಸಂಹಿತೆ ಪಾಲಿಸುವಂತೆ ವಿನಂತಿಸಿ ಸಾರ್ವಜನಿಕರ ಗಮನಕ್ಕೆ ಬರುವಂತೆ ಬ್ಯಾನರ್ ಹಾಕಲಾಗಿದೆ. ಪುರುಷರು–ಅಂಗಿ ಧೋತಿ, ಪ್ಯಾಂಟ್ ಮತ್ತು ಕುರ್ತಾ ಪೈಜಾಮ, ಮಹಿಳೆಯರು–ಸೀರೆ, ಚೂಡಿದಾರ ಧರಿಸಿ ದೇವರ ದರ್ಶನ ಮಾಡಬಹುದೆಂದು ತಿಳಿಸಲಾಗಿದೆ.</p>.<p>ಈ ಕುರಿತು ಪ್ರತಿಕ್ರಿಯಿಸಿದ ದೇವಸ್ಥಾನದ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ , ‘ಮುರುಡೇಶ್ವರನ ಸನ್ನಿಧಿಯಲ್ಲಿ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ದೇವರ ದರ್ಶನ ಮಾಡುವ ಭಕ್ತಾಧಿಗಳಿಗೆ ವಸ್ತ್ರಸಂಹಿತೆ ನಿಯಮ ಪಾಲಿಸುವಂತೆ ವಿನಂತಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಭಕ್ತರ ಸ್ಪಂದನೆ ನೋಡಿ ಈ ನಿಯಮವನ್ನು ಕಡ್ಡಾಯಗೊಳಿಸಲಾವುದು’ ಎಂದರು.</p>.<p>ದೇವಸ್ಥಾನದ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಆಗ್ರಹಿಸಿ 2022ರ ಡಿಸೆಂಬರ್ ನಲ್ಲಿ ಸನಾತನ ಹಿಂದೂ ಜನಜಾಗೃತಿ ಸಮಿತಿ ಸ್ಥಳೀಯ ಘಟಕ ಮತ್ತು ವಿವಿಧ ಹಿಂದೂ ಪರ ಸಂಘಟನೆ ವತಿಯಿಂದ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ</strong>: ‘ಮುರುಡೇಶ್ವರದ ಶಿವ ದೇವಸ್ಥಾನದ ದರ್ಶನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ನಿಯಮ ಪಾಲಿಸಬೇಕು’ ಎಂದು ದೇವಸ್ಥಾನದ ವತಿಯಿಂದ ಭಾನುವಾರ ಸೂಚನೆ ಹೊರಡಿಸಲಾಗಿದೆ. </p>.<p>ಈ ಕುರಿತು, ಭಕ್ತರು ವಸ್ತ್ರಸಂಹಿತೆ ಪಾಲಿಸುವಂತೆ ವಿನಂತಿಸಿ ಸಾರ್ವಜನಿಕರ ಗಮನಕ್ಕೆ ಬರುವಂತೆ ಬ್ಯಾನರ್ ಹಾಕಲಾಗಿದೆ. ಪುರುಷರು–ಅಂಗಿ ಧೋತಿ, ಪ್ಯಾಂಟ್ ಮತ್ತು ಕುರ್ತಾ ಪೈಜಾಮ, ಮಹಿಳೆಯರು–ಸೀರೆ, ಚೂಡಿದಾರ ಧರಿಸಿ ದೇವರ ದರ್ಶನ ಮಾಡಬಹುದೆಂದು ತಿಳಿಸಲಾಗಿದೆ.</p>.<p>ಈ ಕುರಿತು ಪ್ರತಿಕ್ರಿಯಿಸಿದ ದೇವಸ್ಥಾನದ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ , ‘ಮುರುಡೇಶ್ವರನ ಸನ್ನಿಧಿಯಲ್ಲಿ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ದೇವರ ದರ್ಶನ ಮಾಡುವ ಭಕ್ತಾಧಿಗಳಿಗೆ ವಸ್ತ್ರಸಂಹಿತೆ ನಿಯಮ ಪಾಲಿಸುವಂತೆ ವಿನಂತಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಭಕ್ತರ ಸ್ಪಂದನೆ ನೋಡಿ ಈ ನಿಯಮವನ್ನು ಕಡ್ಡಾಯಗೊಳಿಸಲಾವುದು’ ಎಂದರು.</p>.<p>ದೇವಸ್ಥಾನದ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಆಗ್ರಹಿಸಿ 2022ರ ಡಿಸೆಂಬರ್ ನಲ್ಲಿ ಸನಾತನ ಹಿಂದೂ ಜನಜಾಗೃತಿ ಸಮಿತಿ ಸ್ಥಳೀಯ ಘಟಕ ಮತ್ತು ವಿವಿಧ ಹಿಂದೂ ಪರ ಸಂಘಟನೆ ವತಿಯಿಂದ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>