<p>ಶಿರಸಿ: ‘ಜಾತೀಯೆ, ಅಸ್ಪೃಶ್ಯತೆ ತುಂಬಿದ್ದ ಸಮಾಜದಲ್ಲಿ ಪಿಡುಗು ಹೋಗಲಾಡಿಸಿ ಸಮಾನತೆಯ ಸಂದೇಶ ಸಾರುವ ಮೂಲಕ ಪರಿಣಾಮಕಾರಿ ಪರಿವರ್ತನೆ ತಂದ ಕೀರ್ತಿ ಬ್ರಹ್ಮಶ್ರೀ ನಾರಾಯಣಗುರು ಅವರಿಗೆ ಸಲ್ಲಬೇಕು’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.</p>.<p>ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿ ಉತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಸಮಾಜ ಮುಖಿ ಕೆಲಸ ಮಾಡುವವರಿಗೆ ನಾರಾಯಣಗುರು ಅವರು ಬಹುದೊಡ್ಡ ಪ್ರೇರಣೆ. ಬ್ರಿಟೀಷರ ಆಡಳಿತದ ಅವಧಿಯಲ್ಲಿ ಸಂಕಷ್ಟಗಳನ್ನು ಮೆಟ್ಟಿ ನಿಂತು ಸಮಾಜಕ್ಕೆ ಸಮಾನತೆಯ ಮಾರ್ಗದರ್ಶನ ತೋರಿದ್ದರು’ ಎಂದರು.</p>.<p>ಉಪನ್ಯಾಸ ನೀಡಿದ ಉಪನ್ಯಾಸಕ ಉಮೇಶ ನಾಯ್ಕ, ‘18ನೇ ಶತಮಾನದ ವೇಳೆಗೆ ಕೇರಳದಲ್ಲಿದ್ದ ಜಾತೀಯತೆ, ಅಸಮಾನತೆಯ ಪಿಡುಗು ನಿವಾರಣೆಗೆ ನಾರಾಯಣಗುರು ಅವರು ಕೈಗೊಂಡಿದ್ದ ಜಾಗೃತಿ ಇಡೀ ದೇಶದಲ್ಲಿ ಪರಿಣಾಮ ಬೀರಿತು. ಇಂದು ಸಮಾನತೆಯ ಜಾಗೃತಿ ಮೂಡಿದ್ದರೆ ಅದು ಬ್ರಹ್ಮಶ್ರೀ ಕೊಡುಗೆ’ ಎಂದರು.</p>.<p>ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ನಾಮಧಾರಿ ಸಮಾಜದ ಪ್ರಮುಖ ಭೀಮಣ್ಣ ನಾಯ್ಕ ಮಾತನಾಡಿದರು.</p>.<p>ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಂದನ ಸಾಗರ, ನಗರಸಭೆ ಉಪಾಧ್ಯಕ್ಷೆ ವೀಣಾ ಶೆಟ್ಟಿ, ಉಪವಿಭಾಗಾಧಿಕಾರಿ ದೇವರಾಜ ಆರ್., ತಹಶೀಲ್ದಾರ್ ಶ್ರೀಧರ ಮುಂದಲಮನಿ, ಪೌರಾಯುಕ್ತ ಕೇಶವ ಚೌಗುಲೆ, ತಾಲ್ಲೂಕು ಪಂಚಾಯ್ತಿ ಇಒ ದೇವರಾಜ ಹಿತ್ತಲಮಕ್ಕಿ, ಡಿಎಸ್ಪಿ ರವಿ ನಾಯ್ಕ, ಗಣಪತಿ ನಾಯ್ಕ ಇದ್ದರು.</p>.<p>ಮಾರಿಕಾಂಬಾ ದೇವಾಲಯದಿಂದ ನಾರಾಯಣ ಗುರುಗಳ ಭಾವಚಿತ್ರದ ಆಕರ್ಷಕ ಮೆರವಣಿಗೆ ನಡೆಯಿತು. ನೂರಾರು ಜನರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ‘ಜಾತೀಯೆ, ಅಸ್ಪೃಶ್ಯತೆ ತುಂಬಿದ್ದ ಸಮಾಜದಲ್ಲಿ ಪಿಡುಗು ಹೋಗಲಾಡಿಸಿ ಸಮಾನತೆಯ ಸಂದೇಶ ಸಾರುವ ಮೂಲಕ ಪರಿಣಾಮಕಾರಿ ಪರಿವರ್ತನೆ ತಂದ ಕೀರ್ತಿ ಬ್ರಹ್ಮಶ್ರೀ ನಾರಾಯಣಗುರು ಅವರಿಗೆ ಸಲ್ಲಬೇಕು’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.</p>.<p>ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿ ಉತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಸಮಾಜ ಮುಖಿ ಕೆಲಸ ಮಾಡುವವರಿಗೆ ನಾರಾಯಣಗುರು ಅವರು ಬಹುದೊಡ್ಡ ಪ್ರೇರಣೆ. ಬ್ರಿಟೀಷರ ಆಡಳಿತದ ಅವಧಿಯಲ್ಲಿ ಸಂಕಷ್ಟಗಳನ್ನು ಮೆಟ್ಟಿ ನಿಂತು ಸಮಾಜಕ್ಕೆ ಸಮಾನತೆಯ ಮಾರ್ಗದರ್ಶನ ತೋರಿದ್ದರು’ ಎಂದರು.</p>.<p>ಉಪನ್ಯಾಸ ನೀಡಿದ ಉಪನ್ಯಾಸಕ ಉಮೇಶ ನಾಯ್ಕ, ‘18ನೇ ಶತಮಾನದ ವೇಳೆಗೆ ಕೇರಳದಲ್ಲಿದ್ದ ಜಾತೀಯತೆ, ಅಸಮಾನತೆಯ ಪಿಡುಗು ನಿವಾರಣೆಗೆ ನಾರಾಯಣಗುರು ಅವರು ಕೈಗೊಂಡಿದ್ದ ಜಾಗೃತಿ ಇಡೀ ದೇಶದಲ್ಲಿ ಪರಿಣಾಮ ಬೀರಿತು. ಇಂದು ಸಮಾನತೆಯ ಜಾಗೃತಿ ಮೂಡಿದ್ದರೆ ಅದು ಬ್ರಹ್ಮಶ್ರೀ ಕೊಡುಗೆ’ ಎಂದರು.</p>.<p>ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ನಾಮಧಾರಿ ಸಮಾಜದ ಪ್ರಮುಖ ಭೀಮಣ್ಣ ನಾಯ್ಕ ಮಾತನಾಡಿದರು.</p>.<p>ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಂದನ ಸಾಗರ, ನಗರಸಭೆ ಉಪಾಧ್ಯಕ್ಷೆ ವೀಣಾ ಶೆಟ್ಟಿ, ಉಪವಿಭಾಗಾಧಿಕಾರಿ ದೇವರಾಜ ಆರ್., ತಹಶೀಲ್ದಾರ್ ಶ್ರೀಧರ ಮುಂದಲಮನಿ, ಪೌರಾಯುಕ್ತ ಕೇಶವ ಚೌಗುಲೆ, ತಾಲ್ಲೂಕು ಪಂಚಾಯ್ತಿ ಇಒ ದೇವರಾಜ ಹಿತ್ತಲಮಕ್ಕಿ, ಡಿಎಸ್ಪಿ ರವಿ ನಾಯ್ಕ, ಗಣಪತಿ ನಾಯ್ಕ ಇದ್ದರು.</p>.<p>ಮಾರಿಕಾಂಬಾ ದೇವಾಲಯದಿಂದ ನಾರಾಯಣ ಗುರುಗಳ ಭಾವಚಿತ್ರದ ಆಕರ್ಷಕ ಮೆರವಣಿಗೆ ನಡೆಯಿತು. ನೂರಾರು ಜನರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>