ರಾಜ್ಯ ಸರ್ಕಾರದ ದ್ವಂದ್ವ ನೀತಿಗಳ ಕಾರಣದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಪಡಿಸಿ, ಯಾವುದೇ ಸಿದ್ಧತೆ ಇಲ್ಲದೆ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿರುವುದು ಅವೈಜ್ಞಾನಿಕ ಕ್ರಮ. ಹಲವಾರು ಶಿಕ್ಷಣ ತಜ್ಷರು, ಸಂಘ ಸಂಸ್ಥೆಗಳ ಪರಿಣತರು, ಶಿಕ್ಷಣ ವಲಯದ ಪ್ರಮುಖರು, ಸಾವಿರಾರು ತಜ್ಷರ ಅಭಿಪ್ರಾಯ ಸಂಗ್ರಹಿಸಿ, ನಿರಂತರ ಅಧ್ಯಯನದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಚಿಸಲಾಗಿದೆ. ಆದ್ದರಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಪಡಿಸಬಾರದೆಂದು ಅಭಿಯಾನವನ್ನು ರಾಜ್ಯದಾದ್ಯಂತ ಆಯೋಜಿಸಿದ್ದೇವೆ ಎಂದರು.