ಮೇ 9ರಂದು ವಿಚಾರಣೆ ನಡೆಸಿದ್ದ ಆಯೋಗವು, ಪ್ರಕರಣದಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿತ್ತು. ಈ ಸಂಬಂಧ ಜುಲೈ 19ರಂದು ಜ್ಞಾಪನಾಪತ್ರ ಕಳುಹಿಸಲಾಗಿತ್ತು. ಆದರೆ, ಸಂಬಂಧಿಸಿದ ಅಧಿಕಾರಿಗಳು ವರದಿ ಸಲ್ಲಿಸಲು ವಿಫಲರಾಗಿದ್ದಾರೆ. ಇದೊಂದು ಗಂಭೀರ ವಿಚಾರವಾಗಿದ್ದು, ಇಬ್ಬರೂ ಆಯೋಗದ ಮುಂದೆ ಹಾಜರಾಗಬೇಕು. ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮತ್ತು ಇತರ ವರದಿಗಳನ್ನು ಹಾಜರುಪಡಿಸಬೇಕು ಎಂದು ಸೂಚಿಸಿದೆ.