<p><strong>ಕಾರವಾರ</strong>: ಇಲ್ಲಿನ ಕದಂಬ ನೌಕಾನೆಲೆಯಲ್ಲಿ ಗುರುವಾರ ಸಂಜೆ ಸೂರ್ಯಾಸ್ತ ಆಗುತ್ತಿದ್ದಂತೆ ನೌಕಾಪಡೆಯ ಧ್ವಜ ಅವರೋಹಣ ನೆರವೇರಿತು. ಅದರ ಬೆನ್ನಲ್ಲೇ ಸಮುದ್ರದಲ್ಲಿ ನಿಂತಿದ್ದ ಮೂರು ಯುದ್ಧನೌಕೆಗಳಿಂದ ಸಿಡಿಮದ್ದುಗಳು ಬಾನೆತ್ತರಕ್ಕೆ ಚಿಮ್ಮಿದವು. ಇದರೊಂದಿಗೆ ಇಂಪಾದ ವಾದ್ಯ ಪರಿಕರಗಳ ಸದ್ದು ನೌಕಾನೆಲೆಯಲ್ಲಿ ಕೇಳಿಬಂತು.</p>.<p>ಹೀಗೆ ಐಎನ್ಎಸ್ ಕದಂಬ ನೌಕಾನೆಲೆಯ ನೌಕಾದಳ ಭವನದ ಆವರಣದಲ್ಲಿ ಗುರುವಾರ ಭಾರತೀಯ ನೌಕಾ ದಿನಾಚರಣೆ ಕಳೆಗಟ್ಟಿತು.</p>.<p>ರಾಜ್ಯಪಾಲ ಥಾವರಚಂದ್ ಗೆಹಲೋತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾಜ್ಯಪಾಲರ ಆಗಮನವಾಗುತ್ತಿದ್ದಂತೆ ನೌಕಾಪಡೆಯ ಬ್ಯಾಂಡ್ ಸಿಬ್ಬಂದಿ ರಾಷ್ಟ್ರಗೀತೆ ಮೊಳಗಿಸಿದರು. ಬಳಿಕ ಅರ್ಧ ಗಂಟೆ ಕಾಲ ವಾದ್ಯ ಪರಿಕರಗಳಲ್ಲಿ ನುಡಿಸಿದ ವಿವಿಧ ದೇಶಭಕ್ತಿ ಗೀತೆ ರೋಮಾಂಚನಗೊಳಿಸಿದವು.</p>.<p>ವಂದೇ ಮಾತರಂ, ಜೈ ಜೈ ಭಾರತಿ, ಏ ಮೇರೆ ವತನ್ ಕೆ ಲೋಗೊ, ಇತರ ಹಾಡುಗಳನ್ನು ನೌಕಾದಳ ಸಿಬ್ಬಂದಿ ಹಲವು ವಾದ್ಯ ಪರಿಕರಗಳಲ್ಲಿ ನುಡಿಸಿದರು. ಬೀಟಿಂಗ್ ರಿಟ್ರೀಟ್ ಮೂಲಕ ದೇಶದ ನೌಕಾಪಡೆಯ ಸಿಬ್ಬಂದಿಯ ತ್ಯಾಗ, ಬಲಿದಾನ ಮತ್ತು ಸಾಮರ್ಥ್ಯವನ್ನು ಸ್ಮರಿಸಿದರು.</p>.<p>ಸಂಭ್ರಮಾಚರಣೆಯ ಭಾಗವಾಗಿ ನೌಕಾಪಡೆಯ ಯಾರ್ಡ್ ಕ್ರಾಫ್ಟ್ ನೌಕೆಗಳಿಗೆ ಅಲಂಕಾರ ಮಾಡಲಾಗಿತ್ತು. ನೌಕೆಗಳಿಂದ ಸಿಡಿದ ಸುಡುಮದ್ದುಗಳ ಚಿತ್ತಾರವು ಆಗಸವನ್ನು ವರ್ಣಮಯಗೊಳಿಸಿದವು. ಅಗ್ನಿವೀರರು, ನೌಕಾಪಡೆಯ ಸಿಬ್ಬಂದಿ, ನೌಕಾನೆಲೆಯ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಜನರನ್ನು ರಂಜಿಸಿದರು.</p>.<p>ಕರ್ನಾಟಕ ನೌನೆಲೆಯ ಮುಖ್ಯಸ್ಥ ಫ್ಲ್ಯಾಗ್ ಕಮಾಂಡೆಂಟ್ ಆಫಿಸರ್ ರಿಯರ್ ಅಡ್ಮಿರಲ್ ವಿಕ್ರಮ್ ಮೆನನ್, ‘1971ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಯುದ್ಧದಲ್ಲಿ ಡಿ.4ರಂದು ಕರಾಚಿಯ ಬಂದರಿನ ಮೇಲೆ ದಾಳಿ ನಡೆಸಿ ಭಾರತವು ವಿಜಯ ಸಾಧಿಸಿತು. ಈ ನೆನಪಿಗೆ ನೌಕಾದಿನ ಆಚರಿಸಲಾಗುತ್ತಿದೆ’ ಎಂದು ಕಾರ್ಯಕ್ರಮಕ್ಕೆ ಮುನ್ನ ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.</p>.<p>ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ನೌಕಾದಳದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<p> ಮೂರು ಯುದ್ಧನೌಕೆಗಳಿಂದ ಸಿಡಿಮದ್ದು ಪ್ರದರ್ಶನ ಕದಂಬ ನೌಕಾಬ್ಯಾಂಡ್ನಿಂದ ಮನಸೆಳೆದ ವಾದನ 1971ರ ಯುದ್ಧದ ವಿಜಯದ ನೆನಪಿಗೆ ಆಚರಣೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಇಲ್ಲಿನ ಕದಂಬ ನೌಕಾನೆಲೆಯಲ್ಲಿ ಗುರುವಾರ ಸಂಜೆ ಸೂರ್ಯಾಸ್ತ ಆಗುತ್ತಿದ್ದಂತೆ ನೌಕಾಪಡೆಯ ಧ್ವಜ ಅವರೋಹಣ ನೆರವೇರಿತು. ಅದರ ಬೆನ್ನಲ್ಲೇ ಸಮುದ್ರದಲ್ಲಿ ನಿಂತಿದ್ದ ಮೂರು ಯುದ್ಧನೌಕೆಗಳಿಂದ ಸಿಡಿಮದ್ದುಗಳು ಬಾನೆತ್ತರಕ್ಕೆ ಚಿಮ್ಮಿದವು. ಇದರೊಂದಿಗೆ ಇಂಪಾದ ವಾದ್ಯ ಪರಿಕರಗಳ ಸದ್ದು ನೌಕಾನೆಲೆಯಲ್ಲಿ ಕೇಳಿಬಂತು.</p>.<p>ಹೀಗೆ ಐಎನ್ಎಸ್ ಕದಂಬ ನೌಕಾನೆಲೆಯ ನೌಕಾದಳ ಭವನದ ಆವರಣದಲ್ಲಿ ಗುರುವಾರ ಭಾರತೀಯ ನೌಕಾ ದಿನಾಚರಣೆ ಕಳೆಗಟ್ಟಿತು.</p>.<p>ರಾಜ್ಯಪಾಲ ಥಾವರಚಂದ್ ಗೆಹಲೋತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾಜ್ಯಪಾಲರ ಆಗಮನವಾಗುತ್ತಿದ್ದಂತೆ ನೌಕಾಪಡೆಯ ಬ್ಯಾಂಡ್ ಸಿಬ್ಬಂದಿ ರಾಷ್ಟ್ರಗೀತೆ ಮೊಳಗಿಸಿದರು. ಬಳಿಕ ಅರ್ಧ ಗಂಟೆ ಕಾಲ ವಾದ್ಯ ಪರಿಕರಗಳಲ್ಲಿ ನುಡಿಸಿದ ವಿವಿಧ ದೇಶಭಕ್ತಿ ಗೀತೆ ರೋಮಾಂಚನಗೊಳಿಸಿದವು.</p>.<p>ವಂದೇ ಮಾತರಂ, ಜೈ ಜೈ ಭಾರತಿ, ಏ ಮೇರೆ ವತನ್ ಕೆ ಲೋಗೊ, ಇತರ ಹಾಡುಗಳನ್ನು ನೌಕಾದಳ ಸಿಬ್ಬಂದಿ ಹಲವು ವಾದ್ಯ ಪರಿಕರಗಳಲ್ಲಿ ನುಡಿಸಿದರು. ಬೀಟಿಂಗ್ ರಿಟ್ರೀಟ್ ಮೂಲಕ ದೇಶದ ನೌಕಾಪಡೆಯ ಸಿಬ್ಬಂದಿಯ ತ್ಯಾಗ, ಬಲಿದಾನ ಮತ್ತು ಸಾಮರ್ಥ್ಯವನ್ನು ಸ್ಮರಿಸಿದರು.</p>.<p>ಸಂಭ್ರಮಾಚರಣೆಯ ಭಾಗವಾಗಿ ನೌಕಾಪಡೆಯ ಯಾರ್ಡ್ ಕ್ರಾಫ್ಟ್ ನೌಕೆಗಳಿಗೆ ಅಲಂಕಾರ ಮಾಡಲಾಗಿತ್ತು. ನೌಕೆಗಳಿಂದ ಸಿಡಿದ ಸುಡುಮದ್ದುಗಳ ಚಿತ್ತಾರವು ಆಗಸವನ್ನು ವರ್ಣಮಯಗೊಳಿಸಿದವು. ಅಗ್ನಿವೀರರು, ನೌಕಾಪಡೆಯ ಸಿಬ್ಬಂದಿ, ನೌಕಾನೆಲೆಯ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಜನರನ್ನು ರಂಜಿಸಿದರು.</p>.<p>ಕರ್ನಾಟಕ ನೌನೆಲೆಯ ಮುಖ್ಯಸ್ಥ ಫ್ಲ್ಯಾಗ್ ಕಮಾಂಡೆಂಟ್ ಆಫಿಸರ್ ರಿಯರ್ ಅಡ್ಮಿರಲ್ ವಿಕ್ರಮ್ ಮೆನನ್, ‘1971ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಯುದ್ಧದಲ್ಲಿ ಡಿ.4ರಂದು ಕರಾಚಿಯ ಬಂದರಿನ ಮೇಲೆ ದಾಳಿ ನಡೆಸಿ ಭಾರತವು ವಿಜಯ ಸಾಧಿಸಿತು. ಈ ನೆನಪಿಗೆ ನೌಕಾದಿನ ಆಚರಿಸಲಾಗುತ್ತಿದೆ’ ಎಂದು ಕಾರ್ಯಕ್ರಮಕ್ಕೆ ಮುನ್ನ ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.</p>.<p>ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ನೌಕಾದಳದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<p> ಮೂರು ಯುದ್ಧನೌಕೆಗಳಿಂದ ಸಿಡಿಮದ್ದು ಪ್ರದರ್ಶನ ಕದಂಬ ನೌಕಾಬ್ಯಾಂಡ್ನಿಂದ ಮನಸೆಳೆದ ವಾದನ 1971ರ ಯುದ್ಧದ ವಿಜಯದ ನೆನಪಿಗೆ ಆಚರಣೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>