ಎನ್.ಸಿ.ಸಿ.ಯ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯಗಳ ವ್ಯಾಪ್ತಿಯ ಕೆಡೆಟ್ಗಳಿಗೆ ಇದೇ ಮೊದಲ ಬಾರಿ ಕಾರವಾರದಲ್ಲಿ ಸಮುದ್ರಯಾನ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಹಿಂದಿನ ವರ್ಷಗಳಲ್ಲಿ ಗೋವಾದಲ್ಲಿ ತರಬೇತಿ ನೀಡಲಾಗುತ್ತಿತ್ತು. ಸೆ.23ರಿಂದ ಅ.2ರ ತನಕ ನಡೆಯುವ ತರಬೇತಿಯಲ್ಲಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 60 ಕೆಡೆಟ್ಗಳು ಪಾಲ್ಗೊಂಡಿದ್ದಾರೆ. ತಲಾ 27 ಅಡಿಗಳಷ್ಟು ಉದ್ದದ, ಮೋಟರ್ ಅಳವಡಿಸಿದ ಮೂರು ಹಾಯಿ ದೋಣಿಗಳಲ್ಲಿ, ಕಾಳಿ ನದಿ ಮತ್ತು ಅರಬ್ಬಿ ಸಮುದ್ರದಲ್ಲಿ ಸುಮಾರು 200ಕ್ಕೂ ಹೆಚ್ಚು ಕಿಲೋಮೀಟರ್ ದೂರದ ಯಾನದಲ್ಲಿ ಪಾಲ್ಗೊಳ್ಳುತ್ತಾರೆ.