ರಾಜ್ಯದ ಗಡಿಭಾಗದಲ್ಲಿರುವ ಕಾರವಾರ ತಾಲ್ಲೂಕಿನಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಐದು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಇರಲಿಲ್ಲ. ಈ ಬಾರಿಯೂ ಮೂರು ಶಾಲೆಗಳು ಇದೇ ಸ್ಥಿತಿಗೆ ತಲುಪಿವೆ. ಜೊಯಿಡಾ ತಾಲ್ಲೂಕಿನಲ್ಲಿಯೂ ಪ್ರತಿ ವರ್ಷ ಸರಾಸರಿ 2–3 ಶಾಲೆಗಳು ಬಾಗಿಲು ಮುಚ್ಚುತ್ತಿವೆ. ಕಡಿಮೆ ವಿದ್ಯಾರ್ಥಿಗಳಿರುವ ಶಾಲೆ ವಿಲೀನಗೊಳಿಸಿದರೆ ಗಡಿಭಾಗದ ಹಲವು ಕನ್ನಡ ಶಾಲೆಗಳು ಮುಚ್ಚಬಹುದು ಎಂಬ ಆತಂಕ ವ್ಯಕ್ತಪಡಿಸುತ್ತಾರೆ ಚಿತ್ತಾಕುಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೂರಜ್ ದೇಸಾಯಿ.