<p><strong>ಸಿದ್ದಾಪುರ</strong>: ಕಳೆದ ವರ್ಷ ಮಳೆಗಾಲದಲ್ಲಿ ತಾಲ್ಲೂಕಿನ ಮಾವಿನಗುಂಡಿ-ಹೊನ್ನಾವರ (ಎನ್ಎಚ್ 206 ) ರಸ್ತೆಯ ಘಟ್ಟ ಪ್ರದೇಶದಲ್ಲಿ ಉಂಟಾಗಿದ್ದ ರಸ್ತೆ ಕುಸಿತದ ಸ್ಥಳದಲ್ಲಿ ದುರಸ್ತಿ ಕಾರ್ಯ ನಡೆಯದೇ ಇರುವುದರಿಂದ ಬೇಸತ್ತ ಹೊನ್ನಾವರ ತಾಲ್ಲೂಕಿನ ಗುಂಡಬಾಳಾದ ರಾಜೇಶ ಶೇಟ್ ಎಂಬವರು ಜಾಗ ಮಾರಾಟಕ್ಕಿದೆ ಎಂಬ ಒಕ್ಕಣೆ ಇರುವ ಪ್ರಿಂಟೌಟ್ ಒಂದನ್ನು ಅಂಟಿಸುವ ಮೂಲಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮಾಧ್ಯಮದ ಮೂಲಕ ಮನವಿಯನ್ನೂ ಮಾಡಿರುವ ಅವರು, ‘ಇಲ್ಲಿ ಕುಸಿತ ಉಂಟಾಗಿ ಒಂದೂವರೆವರ್ಷವಾಗಿದೆ. ಈ ಬಗ್ಗೆ ಅನೇಕ ಸಲ ರಾಷ್ಟ್ರೀಯ ಹೆದ್ದಾರಿ ಸಹಾಯವಾಣಿಗೆ ದೂರು ಸಲ್ಲಿಸಿದ್ದೇನೆ. ಶಿರಸಿ-ಕುಮಟಾ ಮಾರ್ಗ ಬಂದ್ ಆದಲ್ಲಿ, ಮಾವಿನಗುಂಡಿ ರಸ್ತೆಯು ಹೊನ್ನಾವರಕ್ಕೆ ಹಾಗೂ ಸಿದ್ದಾಪುರಕ್ಕೆ ಪ್ರಮುಖ ಮಾರ್ಗವಾಗಿರುತ್ತದೆ. ಆದ್ದರಿಂದ ಇದರ ದುರಸ್ತಿಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿ ವಿನಂತಿʼ ಎಂದು ಅವರು ಆಗ್ರಹಿಸಿದ್ದಾರೆ.</p>.<p>'ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್ಎಚ್ 206 ಅನ್ನು ಸಂಪೂರ್ಣವಾಗಿ ಮರೆತಂತಿದೆ. ಚಾರ್ಮಾಡಿ ಘಟ್ಟವನ್ನು 6 ತಿಂಗಳಿಗೊಮ್ಮೆ ದುರಸ್ತಿ ಮಾಡಲಾಗುತ್ತದೆ. ಆದರೆ ಮಾವಿನಗುಂಡಿ ಘಟ್ಟದ ರಸ್ತೆಯಲ್ಲಿ ಮರ ಬಿದ್ದರೆ 15 ದಿನಗಳಾದರೂ ತೆರವುಗೊಳಿಸುವುದಿಲ್ಲ.ಇದೀಗ ಶಿರಸಿ-ಕುಮಟಾ ರಸ್ತೆ ಕಾಮಗಾರಿಯ ಕಾರಣದಿಂದ ಮಾವಿನಗುಂಡಿ ಘಟ್ಟದಲ್ಲಿ ಭಾರಿ ವಾಹನಗಳ ಓಡಾಟವೂ ಪ್ರಾರಂಭವಾಗಿದೆ. ಅದರೊಂದಿಗೆ ರಾಷ್ಟ್ರೀಯ ಹೆದ್ದಾರಿ ಸಹಾಯವಾಣಿ (1033)ಯನ್ನು ಸಂಪರ್ಕಿಸುವುದು ಕೂಡ ದೊಡ್ಡ ಸಾಹಸವಾಗಿದೆ' ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ಕಳೆದ ವರ್ಷ ಮಳೆಗಾಲದಲ್ಲಿ ತಾಲ್ಲೂಕಿನ ಮಾವಿನಗುಂಡಿ-ಹೊನ್ನಾವರ (ಎನ್ಎಚ್ 206 ) ರಸ್ತೆಯ ಘಟ್ಟ ಪ್ರದೇಶದಲ್ಲಿ ಉಂಟಾಗಿದ್ದ ರಸ್ತೆ ಕುಸಿತದ ಸ್ಥಳದಲ್ಲಿ ದುರಸ್ತಿ ಕಾರ್ಯ ನಡೆಯದೇ ಇರುವುದರಿಂದ ಬೇಸತ್ತ ಹೊನ್ನಾವರ ತಾಲ್ಲೂಕಿನ ಗುಂಡಬಾಳಾದ ರಾಜೇಶ ಶೇಟ್ ಎಂಬವರು ಜಾಗ ಮಾರಾಟಕ್ಕಿದೆ ಎಂಬ ಒಕ್ಕಣೆ ಇರುವ ಪ್ರಿಂಟೌಟ್ ಒಂದನ್ನು ಅಂಟಿಸುವ ಮೂಲಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮಾಧ್ಯಮದ ಮೂಲಕ ಮನವಿಯನ್ನೂ ಮಾಡಿರುವ ಅವರು, ‘ಇಲ್ಲಿ ಕುಸಿತ ಉಂಟಾಗಿ ಒಂದೂವರೆವರ್ಷವಾಗಿದೆ. ಈ ಬಗ್ಗೆ ಅನೇಕ ಸಲ ರಾಷ್ಟ್ರೀಯ ಹೆದ್ದಾರಿ ಸಹಾಯವಾಣಿಗೆ ದೂರು ಸಲ್ಲಿಸಿದ್ದೇನೆ. ಶಿರಸಿ-ಕುಮಟಾ ಮಾರ್ಗ ಬಂದ್ ಆದಲ್ಲಿ, ಮಾವಿನಗುಂಡಿ ರಸ್ತೆಯು ಹೊನ್ನಾವರಕ್ಕೆ ಹಾಗೂ ಸಿದ್ದಾಪುರಕ್ಕೆ ಪ್ರಮುಖ ಮಾರ್ಗವಾಗಿರುತ್ತದೆ. ಆದ್ದರಿಂದ ಇದರ ದುರಸ್ತಿಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿ ವಿನಂತಿʼ ಎಂದು ಅವರು ಆಗ್ರಹಿಸಿದ್ದಾರೆ.</p>.<p>'ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್ಎಚ್ 206 ಅನ್ನು ಸಂಪೂರ್ಣವಾಗಿ ಮರೆತಂತಿದೆ. ಚಾರ್ಮಾಡಿ ಘಟ್ಟವನ್ನು 6 ತಿಂಗಳಿಗೊಮ್ಮೆ ದುರಸ್ತಿ ಮಾಡಲಾಗುತ್ತದೆ. ಆದರೆ ಮಾವಿನಗುಂಡಿ ಘಟ್ಟದ ರಸ್ತೆಯಲ್ಲಿ ಮರ ಬಿದ್ದರೆ 15 ದಿನಗಳಾದರೂ ತೆರವುಗೊಳಿಸುವುದಿಲ್ಲ.ಇದೀಗ ಶಿರಸಿ-ಕುಮಟಾ ರಸ್ತೆ ಕಾಮಗಾರಿಯ ಕಾರಣದಿಂದ ಮಾವಿನಗುಂಡಿ ಘಟ್ಟದಲ್ಲಿ ಭಾರಿ ವಾಹನಗಳ ಓಡಾಟವೂ ಪ್ರಾರಂಭವಾಗಿದೆ. ಅದರೊಂದಿಗೆ ರಾಷ್ಟ್ರೀಯ ಹೆದ್ದಾರಿ ಸಹಾಯವಾಣಿ (1033)ಯನ್ನು ಸಂಪರ್ಕಿಸುವುದು ಕೂಡ ದೊಡ್ಡ ಸಾಹಸವಾಗಿದೆ' ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>