ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮಾಧ್ಯಮದ ಮೂಲಕ ಮನವಿಯನ್ನೂ ಮಾಡಿರುವ ಅವರು, ‘ಇಲ್ಲಿ ಕುಸಿತ ಉಂಟಾಗಿ ಒಂದೂವರೆವರ್ಷವಾಗಿದೆ. ಈ ಬಗ್ಗೆ ಅನೇಕ ಸಲ ರಾಷ್ಟ್ರೀಯ ಹೆದ್ದಾರಿ ಸಹಾಯವಾಣಿಗೆ ದೂರು ಸಲ್ಲಿಸಿದ್ದೇನೆ. ಶಿರಸಿ-ಕುಮಟಾ ಮಾರ್ಗ ಬಂದ್ ಆದಲ್ಲಿ, ಮಾವಿನಗುಂಡಿ ರಸ್ತೆಯು ಹೊನ್ನಾವರಕ್ಕೆ ಹಾಗೂ ಸಿದ್ದಾಪುರಕ್ಕೆ ಪ್ರಮುಖ ಮಾರ್ಗವಾಗಿರುತ್ತದೆ. ಆದ್ದರಿಂದ ಇದರ ದುರಸ್ತಿಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿ ವಿನಂತಿʼ ಎಂದು ಅವರು ಆಗ್ರಹಿಸಿದ್ದಾರೆ.