‘ಉತ್ತರ ಕನ್ನಡ ಜಿಲ್ಲೆಯಲ್ಲಿ ಇಲಾಖೆಯಲ್ಲಿ ನೋಂದಾಯಿತ 65,371 ಸದಸ್ಯರಿದ್ದಾರೆ. ಜಿಲ್ಲಾ ಕಚೇರಿಯಿಂದ 18,528 ಹಾಗೂ ಮಂಡಳಿಯಿಂದ 9,355, ಒಟ್ಟು 27,883 ನೋಂದಾಯಿತ ಕಾರ್ಮಿಕರ ಪಟ್ಟಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಇದರ ಜೊತೆಯಲ್ಲಿ 26,389 ಕಾರ್ಮಿಕರಿಗೆ ಆಧಾರ ಸಂಖ್ಯೆ ಆಧರಿಸಿ, ನೇರವಾಗಿ ಬೆಂಗಳೂರಿನ ಮಂಡಳಿಯಿಂದ ಧನಸಹಾಯ ಜಮಾ ಮಾಡಲಾಗಿದೆ ಎಂದು ಇಲಾಖೆಯ ಮಾಹಿತಿ ನೀಡಿದೆ. ಆದರೆ, ಈ ಮಾಹಿತಿ ಹಾಗೂ ವಾಸ್ತವಿಕ ಸಂಗತಿಗೆ ಹೊಂದಾಣಿಕೆಯಾಗುತ್ತಿಲ್ಲ. 10ಸಾವಿರಕ್ಕಿಂತ ಹೆಚ್ಚು ಕಾರ್ಮಿಕರ ಖಾತೆಗೆ, ಲಾಕ್ಡೌನ್ ಸಂದರ್ಭದಲ್ಲಿ ಘೋಷಿಸಿದ್ದ ಧನಸಹಾಯ ಸಂದಾಯವಾಗಿಲ್ಲ’ ಎಂದು ಅವರು ಆರೋಪಿಸಿದ್ದಾರೆ.