ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಒಂದು ಅವಕಾಶವನ್ನು ನಾವು ಕಳೆದುಕೊಂಡರೆ, ಉತ್ತರ ಕನ್ನಡದಲ್ಲಿ ಮತ್ತೆಂದೂ ವಿಮಾನ ನಿಲ್ದಾಣ ನಿರ್ಮಾಣವಾಗಲು ಸಾಧ್ಯವೇ ಇಲ್ಲ.ನೌಕಾಪಡೆಯವರು ₹ 3,000 ಕೋಟಿ ವೆಚ್ಚ ಮಾಡಿ 1,290 ಎಕರೆ ಜಮೀನನ್ನು ವಿಮಾನ ನಿಲ್ದಾಣಕ್ಕೆ ಅಭಿವೃದ್ಧಿ ಮಾಡುತ್ತಿದ್ದಾರೆ. ಅಂಥದ್ದರಲ್ಲಿ ₹ 200ರಿಂದ ₹ 250 ಕೋಟಿ ಖರ್ಚು ಮಾಡಿ 90– 95 ಎಕರೆ ಜಮೀನನ್ನು ನಾವು ಕೊಟ್ಟರೆ ಜಿಲ್ಲೆಗೆ ವಿಮಾನ ನಿಲ್ದಾಣ ಸಿಗುತ್ತದೆ. ಇದರಿಂದ ಉದ್ಯೋಗಾವಕಾಶ, ಪ್ರವಾಸೋದ್ಯಮಕ್ಕೆ ಅನುಕೂಲವಾಗಲಿದೆ. ಹಾಗಾಗಿ ಈ ಯೋಜನೆ ಮಾತ್ರ ನಿಲ್ಲುವುದಿಲ್ಲ’ ಎಂದು ಒತ್ತಿ ಹೇಳಿದರು.