ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ, ವಿಧಾನಸಭೆ, ಲೋಕಸಭೆ ಚುನಾವಣೆ ಬಂತೆಂದರೆ ’ಬಾಡಿಗೆ ಪ್ರಚಾರಕ’ರಿಗೆ ಎಲ್ಲಿಲ್ಲದ ಬೇಡಿಕೆ. ಹೊಟ್ಟೆಪಾಡಿಗಾಗಿ ಕುತ್ತಿಗೆಗೆ ರಾಜಕೀಯ ಪಕ್ಷಗಳ ಶಾಲು, ಕೈಯಲ್ಲಿ ಒಂದಿಷ್ಟು ಕರಪತ್ರ ಹಿಡಿದುಕೊಂಡು, ಹಳ್ಳಿಗಳಲ್ಲಿ ಸಂಚರಿಸುತ್ತಿದ್ದ ಇಂತಹ ತಂಡಗಳು ಈ ಬಾರಿ ಎಲ್ಲಿಯೂ ಕಾಣಸಿಗುತ್ತಿಲ್ಲ.