<p><strong>ಶಿರಸಿ:</strong> ಇಲ್ಲಿನ ದೇವಿಕೆರೆಯಲ್ಲಿರುವ ವಿಜಯಾ ಬ್ಯಾಂಕ್ ಶಾಖೆಯನ್ನು ಸ್ಥಳಾಂತರ ಮಾಡದೆ, ಇಲ್ಲಿಯೇ ಉಳಿಸಬೇಕು ಎಂದು ಒತ್ತಾಯಿಸಿ, ಗ್ರಾಹಕರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>ವಿಜಯಾ ಬ್ಯಾಂಕ್ ಶಾಖೆಯ ಸಹಾಯಕ ವ್ಯವಸ್ಥಾಪಕ ಅಪ್ಪು ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಹಲವಾರು ವರ್ಷಗಳಿಂದ ಗ್ರಾಹಕರಾಗಿರುವ ಅನೇಕರಿಗೆ ಈ ಬ್ಯಾಂಕ್ ಶಾಖೆಯಿಂದ ಅನುಕೂಲಗಳಾಗಿವೆ. ಇಲ್ಲಿನ ವ್ಯವಹಾರ ಕೂಡ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಈಗ ಏಕಾಏಕಿ ಬ್ಯಾಂಕ್ಗಳ ವಿಲೀನ ಪ್ರಕ್ರಿಯೆ ನೆಪವೊಡ್ಡಿ, ಈ ಶಾಖೆಯನ್ನು ಹೊಸಪೇಟೆ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಗೆ ವರ್ಗಾಯಿಸುತ್ತಿರುವುದು ವ್ಯವಹಾರದ ದೃಷ್ಟಿಯಿಂದ ತೊಂದರೆಯಾಗುತ್ತದೆ. ಬ್ಯಾಂಕ್ ಆಫ್ ಬರೋಡಾ ಶಾಖೆ ಇರುವಲ್ಲಿ ಈಗಾಗಲೇ ಇನ್ನೆರಡು ಬ್ಯಾಂಕ್ ಇರುವುದರಿಂದ ವ್ಯವಹಾರ ಅಷ್ಟಾಗಿ ನಡೆಯುವುದಿಲ್ಲ. ಒಂದೊಮ್ಮೆ ಈ ಶಾಖೆಯನ್ನು ಅಲ್ಲಿಗೆ ಸ್ಥಳಾಂತರಿಸಿದರೆ, ಇಲ್ಲಿರುವ ಗ್ರಾಹಕರು, ಈ ಬ್ಯಾಂಕ್ ಖಾತೆಯನ್ನು ರದ್ದುಗೊಳಿಸಲು ತೀರ್ಮಾನಿಸಿದ್ದಾರೆ. ಇದರಿಂದ ಬ್ಯಾಂಕ್ಗೆ ನಷ್ಟವಾಗುತ್ತದೆ. ಪ್ರಸ್ತುತ ಇರುವ ವಿಜಯಾ ಬ್ಯಾಂಕ್ ಶಾಖೆಯು ಬಸ್ ನಿಲ್ದಾಣಕ್ಕೂ ಹತ್ತಿರವಿದೆ. ಹೀಗಾಗಿ ಇದನ್ನು ಇಲ್ಲಿಯೇ ಉಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.</p>.<p>ಬ್ಯಾಂಕ್ ಆಫ್ ಬರೋಡಾದ ಅಧ್ಯಕ್ಷ, ವಿಭಾಗ ವ್ಯವಸ್ಥಾಪಕ, ಪ್ರಾದೇಶಿಕ ವ್ಯವಸ್ಥಾಪಕರಿಗೆ ಈ ಮನವಿಪತ್ರವನ್ನು ಕಳುಹಿಸಲಾಗಿದೆ. ಬ್ಯಾಂಕ್ ಗ್ರಾಹಕರಾದ ಮಹೇಶ ನಾಯ್ಕ, ಎಂ.ಎಸ್.ಹೆಗಡೆ, ಗಣಪತಿ ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಇಲ್ಲಿನ ದೇವಿಕೆರೆಯಲ್ಲಿರುವ ವಿಜಯಾ ಬ್ಯಾಂಕ್ ಶಾಖೆಯನ್ನು ಸ್ಥಳಾಂತರ ಮಾಡದೆ, ಇಲ್ಲಿಯೇ ಉಳಿಸಬೇಕು ಎಂದು ಒತ್ತಾಯಿಸಿ, ಗ್ರಾಹಕರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>ವಿಜಯಾ ಬ್ಯಾಂಕ್ ಶಾಖೆಯ ಸಹಾಯಕ ವ್ಯವಸ್ಥಾಪಕ ಅಪ್ಪು ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಹಲವಾರು ವರ್ಷಗಳಿಂದ ಗ್ರಾಹಕರಾಗಿರುವ ಅನೇಕರಿಗೆ ಈ ಬ್ಯಾಂಕ್ ಶಾಖೆಯಿಂದ ಅನುಕೂಲಗಳಾಗಿವೆ. ಇಲ್ಲಿನ ವ್ಯವಹಾರ ಕೂಡ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಈಗ ಏಕಾಏಕಿ ಬ್ಯಾಂಕ್ಗಳ ವಿಲೀನ ಪ್ರಕ್ರಿಯೆ ನೆಪವೊಡ್ಡಿ, ಈ ಶಾಖೆಯನ್ನು ಹೊಸಪೇಟೆ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಗೆ ವರ್ಗಾಯಿಸುತ್ತಿರುವುದು ವ್ಯವಹಾರದ ದೃಷ್ಟಿಯಿಂದ ತೊಂದರೆಯಾಗುತ್ತದೆ. ಬ್ಯಾಂಕ್ ಆಫ್ ಬರೋಡಾ ಶಾಖೆ ಇರುವಲ್ಲಿ ಈಗಾಗಲೇ ಇನ್ನೆರಡು ಬ್ಯಾಂಕ್ ಇರುವುದರಿಂದ ವ್ಯವಹಾರ ಅಷ್ಟಾಗಿ ನಡೆಯುವುದಿಲ್ಲ. ಒಂದೊಮ್ಮೆ ಈ ಶಾಖೆಯನ್ನು ಅಲ್ಲಿಗೆ ಸ್ಥಳಾಂತರಿಸಿದರೆ, ಇಲ್ಲಿರುವ ಗ್ರಾಹಕರು, ಈ ಬ್ಯಾಂಕ್ ಖಾತೆಯನ್ನು ರದ್ದುಗೊಳಿಸಲು ತೀರ್ಮಾನಿಸಿದ್ದಾರೆ. ಇದರಿಂದ ಬ್ಯಾಂಕ್ಗೆ ನಷ್ಟವಾಗುತ್ತದೆ. ಪ್ರಸ್ತುತ ಇರುವ ವಿಜಯಾ ಬ್ಯಾಂಕ್ ಶಾಖೆಯು ಬಸ್ ನಿಲ್ದಾಣಕ್ಕೂ ಹತ್ತಿರವಿದೆ. ಹೀಗಾಗಿ ಇದನ್ನು ಇಲ್ಲಿಯೇ ಉಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.</p>.<p>ಬ್ಯಾಂಕ್ ಆಫ್ ಬರೋಡಾದ ಅಧ್ಯಕ್ಷ, ವಿಭಾಗ ವ್ಯವಸ್ಥಾಪಕ, ಪ್ರಾದೇಶಿಕ ವ್ಯವಸ್ಥಾಪಕರಿಗೆ ಈ ಮನವಿಪತ್ರವನ್ನು ಕಳುಹಿಸಲಾಗಿದೆ. ಬ್ಯಾಂಕ್ ಗ್ರಾಹಕರಾದ ಮಹೇಶ ನಾಯ್ಕ, ಎಂ.ಎಸ್.ಹೆಗಡೆ, ಗಣಪತಿ ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>