<p><strong>ಕಾರವಾರ: ‘</strong>ಸಮಾಜಕ್ಕೆ ಒಳಿತಾಗುವ ಕೆಲಸಗಳನ್ನು ಸಂಘಟನಾತ್ಮಕವಾಗಿ ಮಾಡಿದರೆ ಬಹುತೇಕ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ’ ಎಂದು ಶಾಸಕ ಸತೀಶ ಸೈಲ್ ಹೇಳಿದರು.</p>.<p>ಇಲ್ಲಿನ ಮೂರವರ್ಮ ವೇದಿಕೆ ಸಮೀಪ ರೋಟರಿ ಕ್ಲಬ್ ಸೀಸೈಡ್ನ ಕಾರವಾರ ಘಟಕವು ಜಿ.ಕೆ.ರಾಮ್ ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್ ನೆರವಿನೊಂದಿಗೆ ಸ್ಥಾಪಿಸಿದ ಬಸ್ ತಂಗುದಾಣವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜನರ ಎಲ್ಲ ಬೇಡಿಕೆಗಳನ್ನು ಸರ್ಕಾರವೇ ಈಡೇರಿಸಲು ಸಾಧ್ಯವಾಗದು. ಸಂಘ–ಸಂಸ್ಥೆಗಳು, ದಾನಿಗಳು ಜನೋಪಯೋಗಿಯಾಗುವ ಯೋಜನೆಗಳನ್ನು ಹಮ್ಮಿಕೊಳ್ಳುವ ಜವಾಬ್ದಾರಿ ನಿಭಾಯಿಸಬೇಕಾಗುತ್ತದೆ’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ‘ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಪಕ್ಕ ಬಿಸಿಲಿನಲ್ಲೇ ಪ್ರಯಾಣಿಕರು ನಿಂತು ಕಾಯುವ ಸಮಸ್ಯೆ ದೂರವಾಗಿದೆ’ ಎಂದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ರೋಟರಿ ಕ್ಲಬ್ ಸೀಸೈಡ್ ಕಾರವಾರ ಘಟಕದ ಅಧ್ಯಕ್ಷೆ ಅನು ಜಯಪ್ರಕಾಶ ಪಿಳ್ಳೈ, ‘ಕೆಲವು ತಿಂಗಳುಗಳಿಂದ ಮಹಿಳೆಯರು, ವಿದ್ಯಾರ್ಥಿಗಳು ಬಿಸಿಲಿನಲ್ಲಿ ಬಸ್ಗೆ ಕಾಯುವುದನ್ನು ನೋಡುತ್ತಿದ್ದೆವು. ಬಸ್ ತಂಗುದಾಣ ನಿರ್ಮಾಣದ ಅಗತ್ಯತೆ ಅರಿತು ಸೌಲಭ್ಯ ಕಲ್ಪಿಸಲಾಗಿದೆ’ ಎಂದರು.</p>.<p>ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೇಕರ್, ರೋಟರಿ ಕ್ಲಬ್ ಜಿಲ್ಲಾ ಪ್ರಾಂತಪಾಲ ಅಶೋಕ ನಾಯ್ಕ, ಸಹಾಯಕ ಪ್ರಾಂತಪಾಲ ರಾಘವೇಂದ್ರ ಪ್ರಭು, ರೋಟರಿ ಕ್ಲಬ್ ಸೀಸೈಡ್ ಪದಾಧಿಕಾರಿಗಳಾದ ಸಂಧ್ಯಾ ರಾವ್, ಸುಷ್ಮಾ ಬಾಡಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: ‘</strong>ಸಮಾಜಕ್ಕೆ ಒಳಿತಾಗುವ ಕೆಲಸಗಳನ್ನು ಸಂಘಟನಾತ್ಮಕವಾಗಿ ಮಾಡಿದರೆ ಬಹುತೇಕ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ’ ಎಂದು ಶಾಸಕ ಸತೀಶ ಸೈಲ್ ಹೇಳಿದರು.</p>.<p>ಇಲ್ಲಿನ ಮೂರವರ್ಮ ವೇದಿಕೆ ಸಮೀಪ ರೋಟರಿ ಕ್ಲಬ್ ಸೀಸೈಡ್ನ ಕಾರವಾರ ಘಟಕವು ಜಿ.ಕೆ.ರಾಮ್ ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್ ನೆರವಿನೊಂದಿಗೆ ಸ್ಥಾಪಿಸಿದ ಬಸ್ ತಂಗುದಾಣವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜನರ ಎಲ್ಲ ಬೇಡಿಕೆಗಳನ್ನು ಸರ್ಕಾರವೇ ಈಡೇರಿಸಲು ಸಾಧ್ಯವಾಗದು. ಸಂಘ–ಸಂಸ್ಥೆಗಳು, ದಾನಿಗಳು ಜನೋಪಯೋಗಿಯಾಗುವ ಯೋಜನೆಗಳನ್ನು ಹಮ್ಮಿಕೊಳ್ಳುವ ಜವಾಬ್ದಾರಿ ನಿಭಾಯಿಸಬೇಕಾಗುತ್ತದೆ’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ‘ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಪಕ್ಕ ಬಿಸಿಲಿನಲ್ಲೇ ಪ್ರಯಾಣಿಕರು ನಿಂತು ಕಾಯುವ ಸಮಸ್ಯೆ ದೂರವಾಗಿದೆ’ ಎಂದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ರೋಟರಿ ಕ್ಲಬ್ ಸೀಸೈಡ್ ಕಾರವಾರ ಘಟಕದ ಅಧ್ಯಕ್ಷೆ ಅನು ಜಯಪ್ರಕಾಶ ಪಿಳ್ಳೈ, ‘ಕೆಲವು ತಿಂಗಳುಗಳಿಂದ ಮಹಿಳೆಯರು, ವಿದ್ಯಾರ್ಥಿಗಳು ಬಿಸಿಲಿನಲ್ಲಿ ಬಸ್ಗೆ ಕಾಯುವುದನ್ನು ನೋಡುತ್ತಿದ್ದೆವು. ಬಸ್ ತಂಗುದಾಣ ನಿರ್ಮಾಣದ ಅಗತ್ಯತೆ ಅರಿತು ಸೌಲಭ್ಯ ಕಲ್ಪಿಸಲಾಗಿದೆ’ ಎಂದರು.</p>.<p>ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೇಕರ್, ರೋಟರಿ ಕ್ಲಬ್ ಜಿಲ್ಲಾ ಪ್ರಾಂತಪಾಲ ಅಶೋಕ ನಾಯ್ಕ, ಸಹಾಯಕ ಪ್ರಾಂತಪಾಲ ರಾಘವೇಂದ್ರ ಪ್ರಭು, ರೋಟರಿ ಕ್ಲಬ್ ಸೀಸೈಡ್ ಪದಾಧಿಕಾರಿಗಳಾದ ಸಂಧ್ಯಾ ರಾವ್, ಸುಷ್ಮಾ ಬಾಡಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>