<p><strong>ಕಾರವಾರ:</strong> ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಿ, ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಹೆಚ್ಚಿಸುವ ಸಂಬಂಧ ರಾಜ್ಯ ಸರ್ಕಾರ ಕೈಗೊಳ್ಳಲಿರುವ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಗೊಂಡಿದೆ. ವರದಿ ಅನ್ವಯ ಜಿಲ್ಲೆಯಲ್ಲಿ 372 ಕೆಪಿಎಸ್ ಶಾಲೆಗಳು ತಲೆ ಎತ್ತಲಿವೆ ಎಂಬುದಾಗಿ ಶಿಕ್ಷಣ ಇಲಾಖೆ ಹೇಳುತ್ತಿದೆ.</p>.<p>ಜಿಲ್ಲೆಯಲ್ಲಿರುವ ಈಗಾಗಲೆ ಕಾರ್ಯನಿರ್ವಹಿಸುತ್ತಿದ್ದ ಪ್ರೌಢಶಾಲೆಗಳನ್ನು ಕೆಪಿಎಸ್ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 8 ಮತ್ತು ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯ 7 ಶಾಲೆಗಳು ಕೆಪಿಎಸ್ ಮೇಲ್ದರ್ಜೆಗೆ ಏರಲಿವೆ.</p>.<p>ಆದರೆ, ಗ್ರಾಮ ಪಂಚಾಯಿತಿಗೆ ಒಂದರಂತೆ ಕೆಪಿಎಸ್ಗಳನ್ನು ತೆರೆದು, ಸುತ್ತಮುತ್ತಲಿನ ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳನ್ನು ಕೆಪಿಎಸ್ ಜೊತೆ ವಿಲೀನಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ. ಈ ಸಂಬಂಧ ರಾಮನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಪ್ರಕ್ರಿಯೆ ಜಾರಿಯಾಗಿದೆ ಎಂಬುದು ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘದ (ಎಐಡಿಎಸ್ಒ) ದೂರು.</p>.<p>‘ಉತ್ತರ ಕನ್ನಡ ಜಿಲ್ಲೆಯಲ್ಲಿ 372 ಕೆಪಿಎಸ್ ತೆರೆಯಲಾಗುತ್ತದೆ ಶಿಕ್ಷಣ ಇಲಾಖೆ ಸಿದ್ಧಪಡಿಸಿದ ಡಿಪಿಆರ್ ಮಾಹಿತಿ ಹೇಳುತ್ತಿದೆ. ಆಯಾ ತಾಲ್ಲೂಕಿನ ಶಾಲೆಗಳ ಪೈಕಿ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಯನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಮೂಲಸೌಕರ್ಯ ಹೆಚ್ಚಿಸಿ, ಕೆಪಿಎಸ್ ತೆರೆಯಲಾಗುತ್ತದೆ. ಅದೇ ಶಾಲೆಯೊಂದಿಗೆ ಸುತ್ತಮುತ್ತಲಿನ 6 ಕಿ.ಮೀ ವ್ಯಾಪ್ತಿಯ ಇತರ ಶಾಲೆಗಳ ವಿದ್ಯಾರ್ಥಿಗಳನ್ನು ಸೆಳೆಯಲಾಗುತ್ತದೆ. ಇದಕ್ಕಾಗಿ 1,529 ಮ್ಯಾಗ್ನೆಟ್ ಶಾಲೆಗಳನ್ನು ಇಲಾಖೆ ಗುರುತಿಸಿಕೊಂಡಿದೆ’ ಎನ್ನುತ್ತಾರೆ ಎಐಡಿಎಸ್ಒ ಜಿಲ್ಲಾ ಘಟಕದ ಸಂಚಾಲಕಿ ಶಶಿಕಲಾ ಮೇಟಿ.</p>.<p>‘ಗುಡ್ಡಗಾಡು ಜಿಲ್ಲೆಯಾಗಿರುವ ಉತ್ತರ ಕನ್ನಡದಲ್ಲಿ ದೂರದ ಹಳ್ಳಿಗಳಲ್ಲಿ ಶಾಲೆಗಳಿದ್ದರೆ ವಿದ್ಯಾರ್ಥಿಗಳಿಗೆ ತಲುಪುವುದು ಸಮಸ್ಯೆ ಆಗಲಿದೆ. ಮಳೆಗಾಲದಲ್ಲಂತೂ ಇನ್ನೂ ಕಷ್ಟವಾಗಲಿದೆ. ಕೆಪಿಎಸ್ ಹೆಚ್ಚಿಸಿ, ಸರ್ಕಾರಿ ಶಾಲೆಗಳ ಬಾಗಿಲು ಮುಚ್ಚುವ ಹುನ್ನಾರ ಸರ್ಕಾರ ಕೈಬಿಡಬೇಕು’ ಎಂಬುದು ಅವರ ಒತ್ತಾಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಿ, ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಹೆಚ್ಚಿಸುವ ಸಂಬಂಧ ರಾಜ್ಯ ಸರ್ಕಾರ ಕೈಗೊಳ್ಳಲಿರುವ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಗೊಂಡಿದೆ. ವರದಿ ಅನ್ವಯ ಜಿಲ್ಲೆಯಲ್ಲಿ 372 ಕೆಪಿಎಸ್ ಶಾಲೆಗಳು ತಲೆ ಎತ್ತಲಿವೆ ಎಂಬುದಾಗಿ ಶಿಕ್ಷಣ ಇಲಾಖೆ ಹೇಳುತ್ತಿದೆ.</p>.<p>ಜಿಲ್ಲೆಯಲ್ಲಿರುವ ಈಗಾಗಲೆ ಕಾರ್ಯನಿರ್ವಹಿಸುತ್ತಿದ್ದ ಪ್ರೌಢಶಾಲೆಗಳನ್ನು ಕೆಪಿಎಸ್ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 8 ಮತ್ತು ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯ 7 ಶಾಲೆಗಳು ಕೆಪಿಎಸ್ ಮೇಲ್ದರ್ಜೆಗೆ ಏರಲಿವೆ.</p>.<p>ಆದರೆ, ಗ್ರಾಮ ಪಂಚಾಯಿತಿಗೆ ಒಂದರಂತೆ ಕೆಪಿಎಸ್ಗಳನ್ನು ತೆರೆದು, ಸುತ್ತಮುತ್ತಲಿನ ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳನ್ನು ಕೆಪಿಎಸ್ ಜೊತೆ ವಿಲೀನಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ. ಈ ಸಂಬಂಧ ರಾಮನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಪ್ರಕ್ರಿಯೆ ಜಾರಿಯಾಗಿದೆ ಎಂಬುದು ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘದ (ಎಐಡಿಎಸ್ಒ) ದೂರು.</p>.<p>‘ಉತ್ತರ ಕನ್ನಡ ಜಿಲ್ಲೆಯಲ್ಲಿ 372 ಕೆಪಿಎಸ್ ತೆರೆಯಲಾಗುತ್ತದೆ ಶಿಕ್ಷಣ ಇಲಾಖೆ ಸಿದ್ಧಪಡಿಸಿದ ಡಿಪಿಆರ್ ಮಾಹಿತಿ ಹೇಳುತ್ತಿದೆ. ಆಯಾ ತಾಲ್ಲೂಕಿನ ಶಾಲೆಗಳ ಪೈಕಿ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಯನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಮೂಲಸೌಕರ್ಯ ಹೆಚ್ಚಿಸಿ, ಕೆಪಿಎಸ್ ತೆರೆಯಲಾಗುತ್ತದೆ. ಅದೇ ಶಾಲೆಯೊಂದಿಗೆ ಸುತ್ತಮುತ್ತಲಿನ 6 ಕಿ.ಮೀ ವ್ಯಾಪ್ತಿಯ ಇತರ ಶಾಲೆಗಳ ವಿದ್ಯಾರ್ಥಿಗಳನ್ನು ಸೆಳೆಯಲಾಗುತ್ತದೆ. ಇದಕ್ಕಾಗಿ 1,529 ಮ್ಯಾಗ್ನೆಟ್ ಶಾಲೆಗಳನ್ನು ಇಲಾಖೆ ಗುರುತಿಸಿಕೊಂಡಿದೆ’ ಎನ್ನುತ್ತಾರೆ ಎಐಡಿಎಸ್ಒ ಜಿಲ್ಲಾ ಘಟಕದ ಸಂಚಾಲಕಿ ಶಶಿಕಲಾ ಮೇಟಿ.</p>.<p>‘ಗುಡ್ಡಗಾಡು ಜಿಲ್ಲೆಯಾಗಿರುವ ಉತ್ತರ ಕನ್ನಡದಲ್ಲಿ ದೂರದ ಹಳ್ಳಿಗಳಲ್ಲಿ ಶಾಲೆಗಳಿದ್ದರೆ ವಿದ್ಯಾರ್ಥಿಗಳಿಗೆ ತಲುಪುವುದು ಸಮಸ್ಯೆ ಆಗಲಿದೆ. ಮಳೆಗಾಲದಲ್ಲಂತೂ ಇನ್ನೂ ಕಷ್ಟವಾಗಲಿದೆ. ಕೆಪಿಎಸ್ ಹೆಚ್ಚಿಸಿ, ಸರ್ಕಾರಿ ಶಾಲೆಗಳ ಬಾಗಿಲು ಮುಚ್ಚುವ ಹುನ್ನಾರ ಸರ್ಕಾರ ಕೈಬಿಡಬೇಕು’ ಎಂಬುದು ಅವರ ಒತ್ತಾಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>