ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡಿಕೆ ತೋಟದಲ್ಲಿ ಕಾರ್ಮಿಕನಿಗೆ ಮಾಲೀಕನಿಂದ ಗುಂಡೇಟು

Last Updated 7 ಜನವರಿ 2022, 6:03 IST
ಅಕ್ಷರ ಗಾತ್ರ

ಶಿರಸಿ: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಮಾಲೀಕ ಗುಂಡು ಹಾರಿಸಿದ ಘಟನೆ ತಾಲ್ಲೂಕಿನ ಬಕ್ಕಳದಲ್ಲಿ ನಡೆದಿದೆ.

ಆರೋಪಿ ದೇವರು ಪರಮೇಶ್ವರ ಭಟ್ಟ (67) ಗುಂಡು ಹಾರಿಸಿದ ಆರೋಪಿ. ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಔಡಾಳದ ಕೇಶವ ರಾಮಾ ಮರಾಠಿ (27) ಗಾಯಗೊಂಡ ಕಾರ್ಮಿಕ.

ಮಂಗಗಳ ಕಾಟ ತಡೆಯಲು ಗುಂಡು ಹಾರಿಸುತ್ತಿದ್ದ ವೇಳೆ ಅದು ಕಾರ್ಮಿಕನಿಗೆ ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು ಅವರನ್ನು ಶೀಘ್ರ ವಶಕ್ಕೆ ಪಡೆಯುವುದಾಗಿ ಪೊಲೀಸರು ತಿಳಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT