‘ಪರೇಶ್ ಮೇಸ್ತಾ ಪ್ರಕರಣದಲ್ಲಿ ಐಜಿಪಿ ಹೇಮಂತ್ ನಿಂಬಾಳ್ಕರ್ ಹಸ್ತಕ್ಷೇಪವಿತ್ತು’ ಎಂಬ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆಗೆ ತಾಲ್ಲೂಕಿನ ಹುಲೇಕಲ್ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಪ್ರತಿಕ್ರಿಯಿಸಿದ ಅವರು, ‘ನಾನು ಜಿಲ್ಲಾ ಉಸ್ತುವಾರಿ ಇದ್ದ ಸಂದರ್ಭದಲ್ಲಿ ಪರೇಶ್ ಮೇಸ್ತಾ ಪ್ರಕರಣ ನಡೆದಿತ್ತು. ಆದರೆ ಅದು ಸಹಜ ಸಾವಲ್ಲ, ಕೊಲೆ ಎಂದು ಬಿಜೆಪಿಗರು ಗಲಾಟೆ ಮಾಡಿದರು. ಸ್ಥಳಕ್ಕೆ ನಾನೂ ಭೇಟಿ ನೀಡಿದ್ದೆ, ಇಡೀ ರಾತ್ರಿ ಸಭೆ ಮಾಡಿದ್ದೆ. ಕೆಲವರು ಕಾನೂನು ಸುವ್ಯವಸ್ಥೆ ಕೈಗೆ ತೆಗೆದುಕೊಂಡರು. ಪೊಲೀಸರು ಕರ್ತವ್ಯ ನಿಭಾಯಿಸಿದರು. ಅಂದಿನ ಐಜಿ ಕೂಡ ಹೊನ್ನಾವರಕ್ಕೆ ಬಂದಿದ್ದರು. ಅವರ ಕಾರಿಗೆ ಬೆಂಕಿ ಹಚ್ಚಿದರು. ಸುದೈವವಶಾತ್ ಅವರು ಅಪಾಯದಿಂದ ಪಾರಾಗಿದ್ದರು. ಸಿಬಿಐ ಈ ಪ್ರಕರಣ ಹಸ್ತಾಂತರಿಸಿದಾಗ ಇದು ಸಹಜ ಸಾವು, ಕೊಲೆಯಲ್ಲ ಎಂಬ ವರದಿ ಬಂದು ಎಷ್ಟೋ ವರ್ಷವಾಗಿದೆ. ಆದರೆ ಇಷ್ಟು ವರ್ಷ ಮಲಗಿದ್ದ ಕಾಗೇರಿ ಈಗ ಯಾಕೆ ಎದ್ದರು? ಜವಾಬ್ದಾರಿ ಸ್ಥಾನದಲ್ಲಿರುವ, ಹಿರಿಯ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಇದು ಶೋಭೆ ತರುವುದಿಲ್ಲ. ಅವರಿಂದ ಇಂಥ ಕೀಳು ಮಟ್ಟದ ಹೇಳಿಕೆ ಅಪೇಕ್ಷಿಸಿರಲಿಲ್ಲ’ ಎಂದರು.