ತಾಲ್ಲೂಕಿನ ಬನವಾಸಿ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ನಾರಾಯಣ ಎಂ.ಎಸ್. ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಸೈಬರ್ ಅಪರಾಧದಿಂದ ಉಂಟಾಗುವ ತೊಂದರೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಪ್ರಯತ್ನ ಮಾಡಿದ್ದಾರೆ. ಜೊತೆಗೆ, ಆಹ್ವಾನ ಪತ್ರಿಕೆಯಲ್ಲಿ ಸೈಬರ್ ಅಪರಾಧವಾದಾಗ ತುರ್ತು ಪರಿಸ್ಥಿತಿ ಮತ್ತು ಮಕ್ಕಳ ಸಹಾಯವಾಣಿ ಹಾಗೂ ಕಳೆದು ಹೋದ ಮೊಬೈಲ್ ದುರ್ಬಳಕೆ ತಡೆಯುವ ಕುರಿತು ಸಂದೇಶ ಪ್ರಕಟಿಸಿದ್ದಾರೆ.