<p><strong>ಸಿದ್ದಾಪುರ:</strong> ರಾಜ್ಯ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮುಂದಾಗಿದ್ದು ಖಂಡನೀಯ. ಚುನಾವಣೆಯಲ್ಲಿ ರಾಜಕೀಯ ಮಾಡಬೇಕೇ ಹೊರತು, ಜನಸಾಮಾನ್ಯರಿಗೆ ತಲುಪುವ ಔಷಧೀಯ ವಿಚಾರದಲ್ಲಿ ಅಲ್ಲ’ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ. ನಾಯ್ಕ ಹಣಜೀಬೈಲ್ ಹೇಳಿದರು.</p>.<p>ಸರ್ಕಾರಿ ಆಸ್ಪತ್ರೆಗಳಿಂದ ಜನೌಷಧಿ ಮಳಿಗೆ ತೆರವುಗೊಳಿಸುವ ರಾಜ್ಯ ಸರ್ಕಾರದ ಆದೇಶ ವಿರೋಧಿಸಿ ತಾಲ್ಲೂಕು ಬಿಜೆಪಿ ವತಿಯಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆ ಎದುರು ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>ಬಿಜೆಪಿ ರಾಜ್ಯ ಶಿಕ್ಷಣ ಪ್ರಕೋಷ್ಠದ ಪ್ರಮುಖ ರವಿ ಹೆಗಡೆ ಹೂವಿನ ಮನೆ, ಬಿಜೆಪಿ ಸಿದ್ದಾಪುರ ತಾಲ್ಲೂಕು ಘಟಕದ ಅಧ್ಯಕ್ಷ ತಿಮ್ಮಪ್ಪ ಮಡಿವಾಳ ಮಾತನಾಡಿ ಮಾತನಾಡಿದರು.</p>.<p>ಬಿಜೆಪಿ ಪ್ರಮುಖರಾದ ಗುರುರಾಜ ಶಾನಭಾಗ, ಎಸ್.ಕೆ. ಮೇಸ್ತ, ಸುರೇಶ ನಾಯ್ಕ ಬಾಲಿಕೊಪ್ಪ, ನಂದನ ಬೋರ್ಕರ, ವಿಜಯೇಂದ್ರ ಗೌಡರ್, ರವಿಕುಮಾರ ನಾಯ್ಕ, ತೋಟಪ್ಪ ನಾಯ್ಕ,ಮಂಜುನಾಥ ಭಟ್ಟ, ವಿನಾಯಕ ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ರಾಜ್ಯ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮುಂದಾಗಿದ್ದು ಖಂಡನೀಯ. ಚುನಾವಣೆಯಲ್ಲಿ ರಾಜಕೀಯ ಮಾಡಬೇಕೇ ಹೊರತು, ಜನಸಾಮಾನ್ಯರಿಗೆ ತಲುಪುವ ಔಷಧೀಯ ವಿಚಾರದಲ್ಲಿ ಅಲ್ಲ’ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ. ನಾಯ್ಕ ಹಣಜೀಬೈಲ್ ಹೇಳಿದರು.</p>.<p>ಸರ್ಕಾರಿ ಆಸ್ಪತ್ರೆಗಳಿಂದ ಜನೌಷಧಿ ಮಳಿಗೆ ತೆರವುಗೊಳಿಸುವ ರಾಜ್ಯ ಸರ್ಕಾರದ ಆದೇಶ ವಿರೋಧಿಸಿ ತಾಲ್ಲೂಕು ಬಿಜೆಪಿ ವತಿಯಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆ ಎದುರು ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>ಬಿಜೆಪಿ ರಾಜ್ಯ ಶಿಕ್ಷಣ ಪ್ರಕೋಷ್ಠದ ಪ್ರಮುಖ ರವಿ ಹೆಗಡೆ ಹೂವಿನ ಮನೆ, ಬಿಜೆಪಿ ಸಿದ್ದಾಪುರ ತಾಲ್ಲೂಕು ಘಟಕದ ಅಧ್ಯಕ್ಷ ತಿಮ್ಮಪ್ಪ ಮಡಿವಾಳ ಮಾತನಾಡಿ ಮಾತನಾಡಿದರು.</p>.<p>ಬಿಜೆಪಿ ಪ್ರಮುಖರಾದ ಗುರುರಾಜ ಶಾನಭಾಗ, ಎಸ್.ಕೆ. ಮೇಸ್ತ, ಸುರೇಶ ನಾಯ್ಕ ಬಾಲಿಕೊಪ್ಪ, ನಂದನ ಬೋರ್ಕರ, ವಿಜಯೇಂದ್ರ ಗೌಡರ್, ರವಿಕುಮಾರ ನಾಯ್ಕ, ತೋಟಪ್ಪ ನಾಯ್ಕ,ಮಂಜುನಾಥ ಭಟ್ಟ, ವಿನಾಯಕ ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>