ಕಳೆದ ವರ್ಷ ರಸ್ತೆಯ ಮಧ್ಯ ಭಾಗದಲ್ಲಿ ಕಾಂಕ್ರೀಟ್ ಹಾಕಿ ದುರಸ್ತಿ ಮಾಡಲಾಗಿತ್ತು. ಕೆಲವು ದಿನಗಳಿಂದ ಸುರಿದ ಮಳೆಗೆ, ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ದೊಡ್ಡ ದೊಡ್ಡ ಹೊಂಡಗಳಾಗಿವೆ. ಇದರ ಅರಿವು ಇಲ್ಲದೇ ವಾಹನಗಳನ್ನು ಚಲಾಯಿಸಿಕೊಂಡು ಬಂದರೆ ಅಪಾಯ ಕಟ್ಟಿಟ್ಟ ಬುತ್ತಿ. ಅದರಲ್ಲೂ ದ್ವಿಚಕ್ರ ವಾಹನ ಸವಾರರಿಗಂತೂ ಜೀವಕ್ಕೇ ಅಪಾಯವಾದೀತು.